Thursday, April 25, 2024
spot_imgspot_img
spot_imgspot_img

ಗ್ರಾಮೀಣಾ ಪ್ರದೇಶಗಳಲ್ಲೂ ಕೊರೊನಾ ಪ್ರಕರಣಗಳು ಏರಿಕೆಯಾಗಬಹುದು; ಡಾ.ಕೆ.ಸುಧಾಕರ್ ಎಚ್ಚರಿಕೆ!

- Advertisement -G L Acharya panikkar
- Advertisement -

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣಾ ಪ್ರದೇಶಗಳಲ್ಲೂ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗಬಹುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ 2-3 ವಾರಗಳಲ್ಲಿ ಸೋಂಕು ಹತೋಟಿಗೆ ಬರಬಹುದು. ಆದರೆ ಗ್ರಾಮೀಣ ಪ್ರದೇಶದಲ್ಲಿ ಏರಿಕೆ ಆಗಲಿದೆ. ಹೀಗಾಗಿ ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದೇವೆ. ಗ್ರಾಮೀಣಾ ಪ್ರದೇಶದಲ್ಲಿ ಸೋಂಕು ಹೆಚ್ಚಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದ್ದಿದ್ದೇವೆ ಎಂದು ತಿಳಿಸಿದ್ದಾರೆ.

ದೊಡ್ಡ ನಗರಗಳಲ್ಲಿ ಎಷ್ಟುಆರೋಗ್ಯ ವ್ಯವಸ್ಥೆ ಇದ್ದರೂ ಐಸಿಯು, ವೆಂಟಿಲೇಟರ್ ಕೊರತೆಯುಂಟಾಗಿದ್ದು, ಹಾಗಾಗಿ ಗ್ರಾಮೀಣ ಭಾಗದಲ್ಲಿ ಸರಿಯಾಗಿ ನೋಡಿಕೊಳ್ಳಬೇಕಾಗುತ್ತದೆ ಅಲ್ಲದೇ ಸರಿಯಾದ ಚಿಕಿತ್ಸೆ ನೀಡಬೇಕಾಗುತ್ತದೆ ಎಂದರು.

- Advertisement -

Related news

error: Content is protected !!