Friday, June 27, 2025
spot_imgspot_img
spot_imgspot_img

ರಾಷ್ಟ್ರೀಯ ಕಾನೂನು ಶಾಲೆ ತಿದ್ದುಪಡಿ ಕಾಯಿದೆಯನ್ನುರದ್ದುಗೊಳಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು : ಬೆಂಗಳೂರು ಸ್ಥಳೀಯರಿಗೆ ಶೇ.25 ಮೀಸಲಾತಿ ನೀಡುವ ರಾಷ್ಟ್ರೀಯ ಕಾನೂನು ಶಾಲೆ ತಿದ್ದುಪಡಿ ಕಾಯಿದೆಯನ್ನು ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.


ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಯಲ್ಲಿ ಸ್ಥಳೀಯರಿಗೆ ಪ್ರಾತಿನಿಧ್ಯ ನೀಡಲು ಕರ್ನಾಟಕ ಸರ್ಕಾರ ವಿಧೇಯಕ ಜಾರಿಗೆ ತಂದಿತ್ತು. ರಾಜ್ಯದ ಸ್ಥಳೀಯ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಲ್ಲಿ ಶೇ 25ರಷ್ಟು ಮೀಸಲಾತಿ ಕಲ್ಪಿಸುವ 2020ರ ಭಾರತೀಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆ ತಿದ್ದುಪಡಿ ಕಾಯಿದೆ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಲಾಗಿತ್ತು.


ಸಿಎಲ್‌ಎಟಿ ಆಕಾಂಕ್ಷಿ 17 ವರ್ಷದ ಬಾಲಚಂದರ್ ಕೃಷ್ಣನ್ ಅರ್ಜಿ ಸಲ್ಲಿಸಿ, ಎನ್‌ಎಲ್‌ಎಸ್‌ಐಯುನಲ್ಲಿ ಸೀಟು ಪಡೆಯಲು ಮೀಸಲಾಯಿ ಕಾಯಿದೆ ಅಡ್ಡಿಯಾಗಲಿದೆ ಎಂದು ಮನವಿ ಸಲ್ಲಿಸಿದ್ದರು. ವಕೀಲ ಸಿ ಕೆ ನಂದಕುಮಾರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಭಾರತೀಯ ವಕೀಲರ ಪರಿಷತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಅರ್ಜಿ ಸಲ್ಲಿಸಿತ್ತು.

ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಬಿ ವಿ ನಾಗರತ್ನ ಮತ್ತು ನ್ಯಾ. ರವಿ ಹೊಸಮನಿ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ನೀಡಿದೆ.

- Advertisement -

Related news

error: Content is protected !!