- Advertisement -
- Advertisement -
ಬೆಂಗಳೂರು:ಬೆಂಗಳೂರು ನಗರದ ಯಲಹಂಕ ಕೆಪಿಟಿಸಿಎಲ್ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 15 ಕ್ಕೂ ಹೆಚ್ಚು ಸಿಬ್ಬಂದಿ ಗಯ್ಗೊಂಡಿದ್ದಾರೆ. ಈ ಪೈಕಿ ಇಬ್ಬರು ಅಧಿಕಾರಿಗಳಿಗೆ ಗಂಭೀರ ಗಾಯಗಳಾಗಿವೆ.
ಶುಕ್ರವಾರ ಮುಂಜಾನೆ 3.30ರ ವೇಳೆಗೆ ಕೆಪಿಟಿಸಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಈ ಸಮಯದಲ್ಲಿ ಘಟಕದಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದರು.ಗಾಯಗೊಂಡ ಸಿಬ್ಬಂದಿಯನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.
ಇಬ್ಬರು ಅಧಿಕಾರಿಗಳು ಮಾತ್ರ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿತ್ತು. ಮಾಹಿತಿ ತಿಳಿದ ತಕ್ಷಣ 7 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಿವೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಸಿ. ಕೆ. ಬಾಬ ಹೇಳಿದ್ದಾರೆ.
- Advertisement -