Thursday, April 25, 2024
spot_imgspot_img
spot_imgspot_img

ತಡರಾತ್ರಿ ಕಾಲ್​ಸೆಂಟರ್ ಯುವಕನ ಬರ್ಬರ ಹತ್ಯೆ- ಪಾರ್ಟಿ ಮಾಡಿ ಮನೆಗೆ ತೆರಳುವಾಗ ಕೃತ್ಯ

- Advertisement -G L Acharya panikkar
- Advertisement -

ಬೆಂಗಳೂರು: ನಿನ್ನೆ ಗೆಳೆಯರ ಜೊತೆ ಪಾರ್ಟಿ ಮಾಡಿ ಬಳಿಕ ಮನೆಗೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆ ಆರ್​.ಟಿ.ನಗರದ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಲೋಕೇಶ್ ಎಂದು ಗುರುತಿಸಲಾಗಿದೆ.

ಲೋಕೇಶ್ ವೃತ್ತಿಯಲ್ಲಿ ಕಾಲ್​ಸೆಂಟರ್ ಉದ್ಯೋಗಿಯಾಗಿದ್ದ ಎಂದು ತಿಳಿದು ಬಂದಿದೆ. ನಿನ್ನೆ ಕೆಲಸಕ್ಕೆ ರಜೆ ಹಾಕಿ ಗೆಳೆಯರ ಜೊತೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದ. ಬಾರ್​ನಲ್ಲಿ ಎಣ್ಣೆ ಪಾರ್ಟಿ ಮಾಡಿ ಬಳಿಕ ಬೈಕ್​ನಲ್ಲಿ ಮನೆಗೆ ತೆರಳುತ್ತಿದ್ದ. ಈ ವೇಳೆ ಆರ್​.ಟಿ.ನಗರದ ದೇವೇಗೌಡ ಪೆಟ್ರೋಲ್ ಬಂಕ್​ ಬಳಿ ಪೆಟ್ರೋಲ್ ಹಾಕಿಸಿಕೊಂಡಿದ್ದಾನೆ. ಪೆಟ್ರೋಲ್ ಹಾಕಿಸಿಕೊಂಡು ಮನೆಗೆ ತೆರಳುವಾಗ ದುಷ್ಕರ್ಮಿಗಳ ಗುಂಪೊಂದು ಆತನನ್ನು ಅಡ್ಡಗಟ್ಟಿದೆ.

ಪೆಟ್ರೋಲ್​ ಬಂಕ್​ನ ನೂರು ಮೀಟರ್​​ ದೂರದಲ್ಲೇ ಬೈಕ್​ ಅಡ್ಡಗಟ್ಟಿ ಲೋಕೇಶ್​ ಮೇಲೆ ಹಲ್ಲೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಇರಿದು ಪರಾರಿಯಾಗಿದ್ದಾರೆ. ಐದಾರು ಮಂದಿ ಈ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಲೋಕೇಶ್ ಸ್ವಲ್ಪ ದೂರ ಓಡಿ ಕುಸಿದು ಬಿದ್ದಿದ್ದಾನೆ. ಕೂಡಲೇ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

- Advertisement -

Related news

error: Content is protected !!