- Advertisement -
- Advertisement -
ಬೆಂಗಳೂರು(ಅ.29): ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ನಿವೃತ್ತಿ ಹಿನ್ನೆಲೆ ಇಂದು ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಹಿರಿಯ ಐಪಿಎಸ್ ಅಧಿಕಾರಿಗಳಾದ ಟಿ.ಸುನೀಲ್ ಕುಮಾರ್ ಮತ್ತು ಆಶೀತ್ ಮೋಹನ್ ಪ್ರಸಾದ್ ನಿವೃತ್ತಿ ಹೊಂದಿದ್ದಾರೆ. ಇಂದು ಇಲಾಖೆಯಿಂದ ಕೋರಮಂಗಲ ಕೆಎಸ್ಆರ್ಪಿ ಕವಾಯತ್ತು ಮೈದಾನದಲ್ಲಿ ಇಬ್ಬರು ಅಧಿಕಾರಿಗಳನ್ನ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಡಿಜಿ-ಐಜಿಪಿ ಪ್ರವೀಣ್ ಸೂದ್ ಸೇರಿದಂತೆ ನಗರದ ಬಹುತೇಕ ಐಪಿಎಸ್ ಅಧಿಕಾರಿಗಳು ಭಾಗಿಯಾಗಿದ್ದರು.
- Advertisement -