Friday, March 29, 2024
spot_imgspot_img
spot_imgspot_img

ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ; ಸಚಿವ ಎಸ್. ಸುರೇಶ್ ಕುಮಾರ್

- Advertisement -G L Acharya panikkar
- Advertisement -

ಬೆಂಗಳೂರು: ಹಲವು ವರ್ಷಗಳಿಂದಲೂ ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೆಎಟಿ ಆದೇಶದಿಂದ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿರುವ 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಸಂಬಂಧಿಸಿದಂತೆ ಮಾರ್ಪಾಡು ಮಾಡಿ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು. ಸಾವಿರಾರು ಶಿಕ್ಷಕರು ವರ್ಗಾವಣೆ ನಿರೀಕ್ಷೆಯಲ್ಲಿದ್ದಾರೆ. ಶಿಕ್ಷಕರಿಗೆ ನೀಡಿದ ಭರವಸೆಯಂತೆ ವರ್ಗಾವಣೆಗೆ ಅವಕಾಶ ಮಾಡಿಕೊಡಲು ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

- Advertisement -

Related news

error: Content is protected !!