Saturday, April 20, 2024
spot_imgspot_img
spot_imgspot_img

ಕನ್ನಡದ ಸರಿಗಮಪ ಖ್ಯಾತಿಯ ಪೊಲೀಸ್ ಪತ್ನಿ ಕೋವಿಡ್ ಗೆ ಬಲಿಯಲ್ಲ ಇದು ಆತ್ಮಹತ್ಯೆ !?

- Advertisement -G L Acharya panikkar
- Advertisement -

ಬೆಂಗಳೂರು: ಕನ್ನಡ ಸರಿಗಮಪ ಖ್ಯಾತಿಯ ಹೆಡ್ ಕಾನ್ ಸ್ಟೇಬಲ್ ಸುಬ್ರಹ್ಮಣ್ಯ ಅವರ ಪತ್ನಿ ಕೋವಿಡ್ ಗೆ ಬಲಿಯೋ ಅಥವಾ ಆತ್ಮಹತ್ಯೆಯೋ ಎಂಬ ಶಂಕೆ ವ್ಯಕ್ತವಾಗಿದ್ದು, ಇದೀಗ ಖಚಿತ ಮಾಹಿತಿ ಮೇರೆಗೆ ಆತ್ಮಹತ್ಯೆಯೆಂದು ತಿಳಿದುಬಂದಿದೆ.

ಸುಬ್ರಹ್ಮಣ್ಯ ಅವರು ಕೋಲಾರ ಮೂಲದವರಾಗಿದ್ದು, ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಪತ್ನಿ ಜ್ಯೋತಿ ವೈಯುಕ್ತಿಕ ಕಾರಣದಿಂದ ಸುಬ್ರಮಣಿ ಪತ್ನಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರೋ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ಉನ್ನತ ಮೂಲಗಳ ಪ್ರಕಾರ ಸುಬ್ರಮಣಿ ಊರಿಗೆ ತೆರಳಿದ್ದರು.ಯಾವುದೋ ವಿಚಾರಕ್ಕೆ ಪತಿ – ಪತ್ನಿ ನಡುವೆ ಗಲಾಟೆಯುಂಟಾಗಿ ಬಳಿಕ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!