Thursday, March 28, 2024
spot_imgspot_img
spot_imgspot_img

ಡಿಸೆಂಬರ್ ಅಂತ್ಯದವರೆಗೂ ಶಾಲೆ ಇಲ್ಲ- ವಿಧಾನ ಸೌಧದಲ್ಲಿ ಯಡಿಯೂರಪ್ಪ ಘೋಷಣೆ

- Advertisement -G L Acharya panikkar
- Advertisement -

ಬೆಂಗಳೂರು: ಡಿಸೆಂಬರ್​ನಲ್ಲಿ ಯಾವುದೇ ಶಾಲೆ ಆರಂಭ ಮಾಡುವುದಿಲ್ಲ ಅಂತಾ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಶಾಲೆ ಆರಂಭಿಸುವ ಪ್ರಸ್ತಾಪ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆ ಬಳಿಕ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.ಕೋವಿಡ್ ಹಿನ್ನೆಲೆಯಿಂದಾಗಿ ರಾಜ್ಯದಲ್ಲಿ ಡಿಸೆಂಬರ್ ನಲ್ಲೂ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಘೋಷಣೆ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ವಿಧಾನ ಸೌಧದಲ್ಲಿ ಸುದ್ಧಿಗೋಷ್ಠಿ ನಡೆಸಿ ಕೆಲವೊಂದು ತಜ್ಞರ ವರದಿ ಪರಿಗಣಿಸಿ ಈ ತೀರ್ಮಾನಕ್ಕೆ ಬಂದಿದ್ದೇವೆ. ಗ್ರಾಮೀಣ ಮಟ್ಟದಲ್ಲಿ ಕೆಲವೊಂದು ಸಮಸ್ಯೆಗಳಿರುವುದರಿಂದ ಡಿಸೆಂಬರ್ ನ ಬಳಿಕ ಸಭೆ ನಡೆಸಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸುದ್ಧಿಗೋಷ್ಠಿ ಯಲ್ಲಿ ಹೇಳಿದರು. ಒಂದರಿಂದ ಪಿಯುಸಿವರೆಗಿನ ಕ್ಲಾಸ್ ಗಳು ಡಿಸೆಂಬರ್ ವರೆಗೆ ನಡೆಯಲ್ಲ.

- Advertisement -

Related news

error: Content is protected !!