- Advertisement -
- Advertisement -
ಬೆಂಗಳೂರು: ಬೆಂಗಳೂರು ಜನರಿಗೆ ಚಾಕು ತೋರಿಸಿ ಮೊಬೈಲ್ ಕಿತ್ತುಕೊಂಡು ಎಸ್ಕೇಪ್ ಆಗ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಅಫ್ಜಲ್ ಪಾಷಾ, ಅಫ್ರಿದ್ ಖಾನ್ ಹಾಗೂ ಪ್ರವೀಣ್ ಕುಮಾರ್ ಬಂಧಿತರು.
ಉಪ್ಪಾರಪೇಟೆಯ ಕೆಂಪೇಗೌಡ ನಗರದ ಬಳಿ ವ್ಯಕ್ತಿಯೊಬ್ಬರು ಮಾತನಾಡುತ್ತಿದ್ದಾಗ ಸ್ಕೂಟರ್ನಲ್ಲಿ ಬಂದ ಇಬ್ಬರು ಆಸಾಮಿಗಳು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 3 ದ್ವಿಚಕ್ರ ವಾಹನಗಳು, 43 ಮೊಬೈಲ್ ಫೋನ್, 22 ಲಕ್ಷ ರೂಪಾಯಿ ಬೆಲೆ ಬಾಳುವ 337 ಗ್ರಾಂ ಚಿನ್ನ ಹಾಗೂ 1,15,000 ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.
- Advertisement -