- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ನಿಯಮಗಳಿಗೆ ವಿರುದ್ಧವಾಗಿ ಹೋಟೆಲ್ ನಲ್ಲಿ ಊಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.
ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು ಈ ಬಗ್ಗೆ ಪೊಲೀಸರು ಇದು ಎಫ್ ಐ ಆರ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗಾಯಕ ವಿಜಯ ಪ್ರಕಾಶ್ ಜತೆ ಸಂಸದ ತೇಜಸ್ವಿ ಸೂರ್ಯ ಅವರು ಹೋಟೆಲ್ ವೊಂದರಲ್ಲಿ ಊಟ ಮಾಡಿರುವ ಫೋಟೋ ವೈರಲ್ ಆಗಿತ್ತು. ಇದನ್ನು ಆಧರಿಸಿ ವಿಜಯ ಡೇವಿಸ್ ಎಂಬವರು ಪೊಲೀಸರಿಗೆ ದೂರು ನೀಡಿದ್ದರು.
- Advertisement -