Friday, April 19, 2024
spot_imgspot_img
spot_imgspot_img

ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ!

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದ ರಾಜಧಾನಿಯ ಜನರು ಈಗಾಗಲೇ ಸಿಲಿಂಡರ್ ಸ್ಪೋಟ, ನಿಗೂಢ ಸ್ಪೋಟದಂತ ಸರಣಿ ಘಟನೆಗಳಿಂದ ಭಯಭೀತರಾಗಿದ್ದಾರೆ. ಇದರ ನಡುವೆ ಇಂದು ಮತ್ತೆ ಬೆಂಗಳೂರಿಗರು ಬೆಚ್ಚಿ ಬೀಳಿಸುವಂತೆ ಘಟನೆಯೊಂದು ನಡೆದಿದೆ.

ಆಟೋದಲ್ಲಿ ಬಂದ ಐವರು ದುಷ್ಕರ್ಮಿಗಳು ಹಾಡಹಗಲೇ ನಡುರಸ್ತೆಯಲ್ಲೇ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ನಡೆದಿದೆ. ಮೃತ ವ್ಯಕ್ತಿ ಬೆಂಗಳೂರಿನ ಅವಲಹಳ್ಳಿ ಬಳಿಯ ಮಾರ್ಗೊಂಡನ ಹಳ್ಳಿಯ ಕುಳ್ಳ ವೆಂಕಟೇಶ್ ಎನ್ನಲಾಗಿದೆ.

ಆಟೋದಲ್ಲಿ ಬಂದ ಆರೋಪಿಗಳು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಕುಳ್ಳ ವೆಂಕಟೇಶ್​ಗೆ ಮೊದಲು ಡಿಕ್ಕಿ ಹೊಡೆದಿದ್ದಾರೆ. ಆತ ಕೆಳಗೆ ಬೀಳುತ್ತಿದ್ದಂತೆ ಲಾಂಗ್​ಗಳಿಂದ ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಪರಿಣಾಮ ಆತ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಜಮೀನು ವಿಚಾರಕ್ಕೆ ಸಂಬಂಧಿಸಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಗೆ ಸಂಬಂಧಿಸಿ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

driving
- Advertisement -

Related news

error: Content is protected !!