- Advertisement -
- Advertisement -
ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಗೆ ಮುನಿರತ್ನಗೆ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ ಹಿನ್ನೆಲೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ರಾಜೀನಾಮೆ ನೀಡಿದ್ದಾರೆ. ಸಂದೇಶ್ ಬಂಡಪ್ಪ ರಾಜೀನಾಮೆ ನೀಡಿದವರು. ರಾಜೀನಾಮೆ ಪತ್ರವನ್ನು ಕ್ಷೇತ್ರದ ಅಧ್ಯಕ್ಷ ಶಿವಣ್ಣಗೌಡರಿಗೆ ರವಾನಿಸಿದ್ದಾರೆ.
ಕಳೆದ 12 ವರ್ಷಗಳಿಂದ ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷದಲ್ಲಿ ನಿಷ್ಠಾವಂತರಾಗಿದ್ದ ತುಳಸಿ ಮುನಿರಾಜುಗೌಡರಿಗೆ ಟಿಕೆಟ್ ಸಿಗದ ಕಾರಣ ನಾನು ನೊಂದು ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪತ್ರದಲ್ಲಿ ಸಂದೇಶ್ ಬಂಡಪ್ಪ ಉಲ್ಲೇಖಿಸಿದ್ದಾರೆ.
- Advertisement -