- Advertisement -
- Advertisement -
ಪುತ್ತೂರು: ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಹಿನ್ನಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ವಿರುದ್ಧ ಭಾರೀ ಆಕ್ರೋಶ ವ್ಯಕ್ತಗೊಂಡಿದ್ದು ಇದೀಗ ಪುತ್ತೂರಿನಲ್ಲಿ ಇವರಿಬ್ಬರಿಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ ಘಟನೆ ನಡೆದಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡರ ವಿರುದ್ಧ ಭಾರೀ ಅಸಮಾಧಾನ ಕೇಳಿ ಬಂದಿದ್ದು, ಕಿಡಿಗೇಡಿಗಳು ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದಾರೆ. ಅಲ್ಲದೇ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ್ದಾರೆ
ಈ ಘಟನೆ ಸಾರ್ವಜನಿಕರ ಗಮನಕ್ಕೆ ಬರುವ ಮೊದಲೇ ನಗರಸಭೆ ಅಧಿಕಾರಿಗಳು ಬ್ಯಾನರ್ ತೆರವುಗೊಳಿಸಿದ್ದಾರೆ.
- Advertisement -