Thursday, May 2, 2024
spot_imgspot_img
spot_imgspot_img

(ಅ.16) ವಿಟ್ಲ ವಲಯ ಬಂಟರ ಸಂಘದ ನೂತನ ಯುವ ಬಂಟರ ಮತ್ತು ನೂತನ ಮಹಿಳಾ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಬಂಟ ಕ್ರೀಡೋತ್ಸವ -2022

- Advertisement -G L Acharya panikkar
- Advertisement -

ವಿಟ್ಲ ವಲಯ ಬಂಟರ ಸಂಘ ಮತ್ತು ವಿಟ್ಲ ವಲಯದ ವ್ಯಾಪ್ತಿಯ ಬಂಟರ ಗ್ರಾಮ ಸಮಿತಿಗಳ ಸಹಕಾರದೊಂದಿಗೆ ವಿಟ್ಲ ವಲಯ ಬಂಟರ ಸಂಘದ ನೂತನ ಯುವ ಬಂಟರ ಮತ್ತು ನೂತನ ಮಹಿಳಾ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಬಂಟ ಕ್ರೀಡೋತ್ಸವ 2022 ದಿನಾಂಕ : 16-10-2022ನೇ ಅದಿತ್ಯವಾರ ದ.ಕ.ಜಿ.ಪಂ. ಸರಕಾರಿ ಶಾಲೆ, ವಿಟ್ಲ ಶಾಲಾ ವಠಾರದಲ್ಲಿ ನಡೆಯಲಿದೆ.

ಉದ್ಘಾಟನಾ ಸಮಾರಂಭ ಸಮಯ : ಬೆಳಿಗ್ಗೆ ಗಂಟೆ 8.30ಕ್ಕೆ ನಡೆಯಲಿದೆ. ಅಧ್ಯಕ್ಷತೆಯನ್ನು ಬಂಟರ ಸಂಘ ವಿಟ್ಲ ವಲಯದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ದಡ್ಡಂಗಡಿ-ಚೆಲ್ಲಡ್ಕ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಸಾಲೆತ್ತೂರು ಬಂಟರ ಸಂಘದ ಅಧ್ಯಕ್ಷ ದೇವಪ್ಪ ಶೇಖ ಪೀಲ್ಯಡ್ಕ ಉದ್ಘಾಟಿಸಲಿದ್ದಾರೆ. ಪ್ರಗತಿಪರ ಕೃಷಿಕ ದಯಾನಂದ ಶೆಟ್ಟಿ ಅಬೀರಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಾಧನೆಗೈದ ಶ್ರೀನಿವಾಸ ರೈ ಕುಂಡಕೋಳಿ ಹಾಗೂ ಶೈಕ್ಷಣಿಕ, ರಾಜಕೀಯ ಕ್ಷೇತ್ರಗಳಲ್ಲಿ ಸಾಧನೆಗೈದ ಭವಾನಿ ರೈ ಕೊಲ್ಯ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ.

ಸಮಾರೋಪ ಸಮಾರಂಭ ಸಂಜೆ ಗಂಟೆ 4.30ಕ್ಕೆ ನಡೆಯಲಿದ್ದು, ಆಶೀರ್ವಚನವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಬಂಟರ ಸಂಘ ವಿಟ್ಲ ವಲಯದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ದಡ್ಡಂಗಡಿ-ಚೆಲ್ಲಡ್ಕ ವಹಿಸಲಿದ್ದಾರೆ. ಅತಿಥಿಗಳಾಗಿ ಬಂಟ್ವಾಳ ತಾಲೂಕು ಬಂಟರ ಸಂಘದ ಚಂದ್ರಹಾಸ ಶೆಟ್ಟಿ ರಂಗೋಲಿ, ಯುವ ಬಂಟರ ಸಂಘ, ವಿಟ್ಲ ವಲಯದ ಗೌರವಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಬಂಟ್ವಾಳ ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ರಮಾ ಯಸ್ ಭಂಡಾರಿ, ಬಂಟ್ವಾಳ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ನಿಶಾನ್ ಆಳ್ವ , ಬ್ಯಾಂಕ್ ಆಫ್ ಬರೋಡಾ, ವಿಟ್ಲ ಶಾಖೆ ಇದರ ವ್ಯವಸ್ಥಾಪಕ ಧೀರಜ್ ಶೆಟ್ಟಿ ಆಗಮಿಸಲಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಮತ್ತು ತಾಲೂಕು ಬಂಟರ ಸಂಘ ಬಂಟ್ವಾಳ ಇದರ ನಿರ್ದೇಶಕ ಭಾಸ್ಕರ ಶೆಟ್ಟಿ ವಿಟ್ಲ, ವಿಟ್ಲ ವಲಯ ಬಂಟರ ಸಂಘದ ಗೌರವಾಧ್ಯಕ್ಷ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ವಿಟ್ಲ ವಲಯ ಬಂಟರ ಸಂಘದ ಉಪಾಧ್ಯಕ್ಷ ಶ್ರೀಧರ ಶೆಟ್ಟಿ ಗುಬ್ಯ ಮೇಗಿನಗುತ್ತು ವಹಿಸಲಿದ್ದಾರೆ.

astr
- Advertisement -

Related news

error: Content is protected !!