Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಪಾರ್ಥಿವ ಶರೀರ ಆಗಮನ ವೇಳೆ ಮಾಧ್ಯಮದವರ ಮೇಲೆ ಆಕ್ರೋಶ

- Advertisement -
- Advertisement -

ಶೋರೂಂಗೆ ಕಲ್ಲು ತೂರಾಟ..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದ್ದು. ಮಂಗಳವಾರ ಮಧ್ಯಾಹ್ನ ಮೃತನ ಪಾರ್ಥಿವ ಶರೀರ ಆಗಮನದ ವೇಳೆ ಬಿ.ಸಿ. ರೋಡ್ ಸಮೀಪದ ಕೈಕಂಬದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ್ದು, ಬೈಕ್ ಶೋ ರೂಂ ಒಂದರ ಮೇಲೆ ಕಲ್ಲು ತೂರಾಟ ನಡೆದಿರುವ ಬಗ್ಗೆ ವರದಿಯಾಗಿದೆ.

ಮಂಗಳವಾರ ಮಧ್ಯಾಹ್ನ ರಹೀಂ ಅವರ ಪಾರ್ಥಿವ ಶರೀರ ಕೈಕಂಬಕ್ಕೆ ಆಗಮಿಸಿದಾಗ ಭಾರೀ ಸಂಖ್ಯೆಯಲ್ಲಿ ಜನರು ಅಂತಿಮ ದರ್ಶನಕ್ಕೆ ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

ದೃಶ್ಯಾವಳಿ ಸರೆ ಹಿಡಿಯಲು ಮುಂದಾದ ರಾಷ್ಟ್ರೀಯ ಮಾದ್ಯಮದ ಕ್ಯಾಮರಾಮನ್ ಒಬ್ಬರನ್ನು ಕಾರಿನಿಂದ ಇಳಿಯಲು ಬಿಡದೆ ಮತ್ತೆ ಕಾರಿಗೆ ತಳ್ಳಿದ ಆಕ್ರೋಶಿತ ಗುಂಪು ಬೆದರಿಕೆ ಒಡ್ಡಿತು. ದೃಶ್ಯ ಸೆರೆ ಹಿಡಿಯುತ್ತಿದ್ದ ಪತ್ರಿಕಾ ಛಾಯಾಗ್ರಾಹಕರಿಗೆ ಧಮ್ಕಿ ಹಾಕಲಾಯಿತು. ಪತ್ರಕರ್ತರೊಬ್ಬರ ಮೊಬೈಲ್ ಕಸಿದುಕೊಂಡು ಫೋಟೊಗಳನ್ನು ಡಿಲೀಟ್ ಮಾಡಲಾಯಿತು. ಈ ಸಂದರ್ಭ ಮತ್ತೆ ಕೆಲವರು ತಕ್ಷಣ ಪತ್ರಕರ್ತರ ನೆರವಿಗೆ ಧಾವಿಸಿ ಆಕ್ರೋಷಿತರನ್ನು ಸಮಾಧಾನಪಡಿಸಿ ಪತ್ರಕರ್ತರಿಗೆ ರಕ್ಷಣೆ ನೀಡಿದರು. ತಮ್ಮದೇ ವಾಹನದಲ್ಲಿ ಕೆಲ ದೂರದವರೆಗೆ ಹೆದ್ದಾರಿಯಲ್ಲಿ ಕರೆದೊಯ್ದು ಸುರಕ್ಷಿತ ಜಾಗದಲ್ಲಿ ಇಳಿಸಿ ನಿಮ್ಮ ಸ್ವರಕ್ಷಣೆಯತ್ತ ಗಮನ ಹರಿಸಿ. ಅಪಾಯಕಾರಿ ಸ್ಥಳದಲ್ಲಿ ಇರಬೇಡಿ ಎಂದು ಬುದ್ಧಿವಾದ ಹೇಳಿದರು. ಈ ಮಧ್ಯೆ ಕೈಕಂಬ. ಬಿ.ಸಿ. ರೋಡ್‌ನಲ್ಲಿ ಭಾರೀ ಪ್ರಮಾಣದ ಪೊಲೀಸ್ ಬಂದೊಬಸ್ತ್ ಏರ್ಪಡಿಸಲಾಗಿದೆ.

ಶವಯಾತ್ರೆಗೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೈಕಂಬದಲ್ಲಿರುವ ಬೈಕ್ ಶೋರೂಂ ಒಂದರ ಮೇಲೆ ಕಲ್ಲು ತೂರಾಟ ನಡೆದಿದೆ. ಶವಯಾತ್ರೆ ಇದ್ದರೂ ಶೋ ರೂಂ ಬಂದ್ ಮಾಡಿಲ್ಲ ಎಂದು ಆಕ್ರೋಶಗೊಂಡ ಗುಂಪೊಂದು ಈ ಕೃತ್ಯ ಎಸಗಿದೆ. ಶೋರೂಂ ಬಂದ್ ಮಾಡಲು ಕಂಪನಿ ಅನುಮತಿ ನೀಡಿಲ್ಲ ಎಂದು ಸಿಬ್ಬಂದಿ ವಾದಿಸಿದಾಗ ಇತರ ಶೋರೂಂಗಳು ಮುಚ್ಚಿರುವುದನ್ನು ಗುಂಪು ತೋರಿಸಿದೆ. ನಂತರ ಸಿಬ್ಬಂದಿ ಶೋರೂಂನ ಶಟರ್ ಎಳೆದಿದ್ದಾರೆ. ಕಲ್ಲು ತೂರಾಟದಿಂದ ಶೋರೂಂನ ಗಾಜಿನ ಬಾಗಿಲುಗಳಿಗೆ ಹಾನಿಯಾಗಿದೆ.

ತಕ್ಷಣವೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ತನಿಖೆ ಮುಂದುವರೆದಿದೆ.

- Advertisement -

Related news

error: Content is protected !!