Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಎರಡು ಲಾರಿಗಳ ನಡುವೆ ಅಪಘಾತ; ಚಾಲಕ ಮೃತ್ಯು, ಮೂವರಿಗೆ ಗಂಭೀರ ಗಾಯ..!

- Advertisement -
- Advertisement -

ಬಂಟ್ವಾಳ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಬಿದ್ದು ಚಾಲಕನೋರ್ವ ಘಟನೆ ಬಂಟ್ವಾಳದ ಸಜೀಪದ ಬಳಿ ಗುರುವಾರ ನಡೆದಿದೆ.

ಮೃತಪಪಟ್ಟ ವ್ಯಕ್ತಿಯನ್ನು ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45) ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಕ್ಲೀನರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಮರು ಬಿದ್ದಿದ್ದು ಗಂಭೀರವಾಗಿದೆ. ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಅಲ್ಪಾಸ್ ಎಂಬವರಿಗೆ ಗಾಯಗಳಾಗಿದ್ದರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಂಚಿನಡ್ಕಪದವು ಕಡೆಯಿಂದ ಸಜೀಪನಡು ಹೋಗುತ್ತಿದ್ದ ವೇಳೆ ಕಂಚಿನಡ್ಕಪದವು ಎಂಬಲ್ಲಿ ಅಪಘಾತ ಸಂಭವಿಸಿದೆ. ಕೆಂಪು ಕಲ್ಲುಗಳನ್ನು ಸಾಗಿಸುವ ಲಾರಿಗೆ ಹಿಂಬದಿಯಿಂದ ಬರುತ್ತಿದ್ದ ಡಾಮರು ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡು ಟಿಪ್ಪರ್ ಲಾರಿಗಳು ಆಳೆತ್ತರದಲ್ಲಿದ್ದ ಅಡಿಕೆ ತೋಟಕ್ಕೆ ಪಲ್ಟಿಯಾಗಿ ಬಿದ್ದಿದೆ.

ಟಿಪ್ಪರ್ ಲಾರಿಯಲ್ಲಿದ್ದ ಬಿಸಿಯಾದ ಡಾಮರು ಮಿಶ್ರಿತ ಜಲ್ಲಿ ಕಲ್ಲುಗಳು ಕೆಂಪು ಕಲ್ಲು ಸಾಗಿಸುವ ಲಾರಿ ಚಾಲಕನ ಮೈ ಮೇಲೆ ಬಿದ್ದಿದೆ. ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ. ಬಿಸಿಯಾದ ಡಾಮರುನಲ್ಲಿ ಬೆಂದು ಹೋಗಿದ್ದ ಚಾಲಕ ರಫೀಕ್ ಆಯ್ಕೆಯಾಗಿದ್ದಾರೆ. ಜೊತೆಗೆ ಇದ್ದ ಕ್ಲೀನರ್ ಯೂಸುಫ್ ನ ಮೇಲೆಯೂ ಡಾಮರು ಬಿದ್ದಿದ್ದು ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮೆಲ್ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!