- Advertisement -
- Advertisement -




ಬಂಟ್ವಾಳ : ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್(15) ಮೃತಪಟ್ಟ ಬಾಲಕ.
ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಶಾಲೆಗೆ ರಜೆಯಾಗಿದ್ದರಿಂದ ಗಡಿಯಾರದಲ್ಲಿರುವ ತನ್ನ ಅಜ್ಜನ ಮನೆಗೆ ಬಂದಿದ್ದು, ಆಟೋ ರಿಕ್ಷಾ ಚಾಲಕರಾಗಿರುವ ಪುತ್ತಾಕರ ಮನೆಯಲ್ಲಿದ್ದ ಈತ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ.
ಈತ ಪುತ್ತೂರು ಮೌಂಟೇನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಎಸ್ ಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದಾನೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ..
- Advertisement -








