ಬಂಟ್ವಾಳ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ, ಅಣ್ಣನೋರ್ವ ತನ್ನ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಪಾಣೆಮಂಗಳೂರು ಬೊಂಡಾಲ ಶಾಂತಿಗುಡ್ಡೆಯಲ್ಲಿ ನಡೆದಿದೆ.
ಇದನ್ನೂ ಓದಿ: ಮುಂಬೈ ಉದ್ಯಮಿಗಳ ಬ್ಲಾಕ್ ಮೈಲ್; ವಿಟ್ಲ ಮೂಲದ ಜೆಪಿ ಶೆಟ್ಟಿ ಗಾಗಿ ಕ್ರೈಂ ಬ್ರಾಂಚ್ ಪೊಲೀಸರಿಂದ ಶೋಧ..!
ಕೊಲೆಯಾದ ವ್ಯಕ್ತಿಯನ್ನು ಶಾಂತಿಗುಡ್ಡೆ ನಿವಾಸಿ ಸುಂದರ (30) ಎನ್ನಲಾಗಿದೆ. ಅವರ ಅಣ್ಣ ರವಿ ಎಂಬಾತನೇ ಕೊಲೆ ಆರೋಪಿಯಾಗಿದ್ದು, ತಲೆ ಮೆರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾದ ಸುಂದರ ಅವಿವಾಹಿತನಾಗಿದ್ದು, ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಮನೆಯ ಸಮೀಪದಲ್ಲಿ ಅಣ್ಣ ರವಿಯ ಮನೆಯಿದ್ದು ಅಲ್ಲಿಂದ ರವಿಯ ಹೆಂಡತಿ ಊಟ ತಿಂಡಿ ನೀಡುತ್ತಿದ್ದರು ಎನ್ನಲಾಗಿದೆ.
ತನ್ನ ಹೆಂಡತಿ ಜೊತೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ರವಿ ಪದೇ ಪದೇ ಸುಂದರನೊಂದಿಗೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಸುಂದರನ ಕಿರುಚಾಟ ಕೇಳಿ ಅಲ್ಲೇ ಸಮೀಪದಲ್ಲಿ ವಾಸವಿರುವ ಮತ್ತೋರ್ವ ಅಣ್ಣ ರಮೇಶ ಬಂದು ನೋಡಿದಾಗ ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದ.
ಇದನ್ನೂ ಓದಿ: ಪುತ್ತೂರು: 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಶುಕ್ರವಾರ ತಡರಾತ್ರಿಯೂ ಅವರ ಮಧ್ಯೆ ಜಗಳ ನಡೆದಿದ್ದು,ಜಗಳ ತಾರಕಕ್ಕೇರಿ ರವಿಯು ಸುಂದರನಿಗೆ ಸಲಾಕೆಯಿಂದ ತಲೆಗೆ ಹೊಡೆದು ಕೊಂದಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.