Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಕಿರುಚಿತ್ರ ತಂಡದ ಐವರಿಗೆ ಗಾಯ!

- Advertisement -
- Advertisement -

ಬಂಟ್ವಾಳ: ಕಾರು ಮರಕ್ಕೆ ಡಿಕ್ಕಿಯಾಗಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಮಂಗಳೂರು ಬಿಸಿರೋಡು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮಂಗಳೂರು ನಿವಾಸಿಗಳಾದ ಆನಂದಿತ್, ಶರತ್,ಶುಸಾನ್, ಹರ್ಷ,ಶ್ರೀರಾಮ್ ಗಾಯಗೊಂಡಿದ್ದಾರೆ.

ಮಂಗಳೂರಿನಿಂದ ಪುತ್ತೂರು ಕಡೆಗೆ ಕಿರುಚಿತ್ರವೊಂದರ ಶೂಟಿಂಗ್ ನಡೆಸಲು ಐದು ಜನರ ತಂಡವೊಂದು ಬೆಳಿಗ್ಗೆ ಮಂಗಳೂರಿನಿಂದ ಹೊರಟಿತ್ತು. ರಾಮಲ್ ಕಟ್ಟೆ ಎಂಬಲ್ಲಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ತೆರಳಿ ಮರವೊಂದಕ್ಕೆ ಡಿಕ್ಕಿಯಾಗಿದೆ.

ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಐವರು ಪ್ರಯಾಣಿಕರ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡರೆ ಉಳಿದ ಮೂವರಿಗೆ ಅಲ್ಪಸ್ವಲ್ಪ ಗಾಯಗಳಾಗಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್. ಐ.ರಾಜೇಶ್ ಕೆ.ವಿ.ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!