ಬಂಟ್ವಾಳ: ಕೊರೊನಾ ಜಾಗೃತಿಗೋಸ್ಕರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ” ಆರೋಗ್ಯ ಹಸ್ತ* ತರಬೇತಿ ಕಾರ್ಯಾಗಾರ ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಮಂಗಳವಾರ ನಡೆಯಿತು.
ವಿಧಾನ ಪರಿಷತ್ ಸದಸ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ಕೆ.ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಮಾನವೀಯತೆ ದೃಷ್ಟಿಯಿಂದ ಜನರ ಸೇವೆ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.
ಮಾಜಿ ಸಚಿವ ರಮಾನಾಥ ರೈ ತರಬೇತುದಾರರಿಗೆ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿ ಸಾರ್ವಜನಿಕರ ಆರೋಗ್ಯದ ಜೊತೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ವಿನಂತಿಸಿದರು. ಡಾ. ರಾಜೇಶ್ ಪೂಜಾರಿ ಪಿಪಿಇ ಕಿಟ್ ಬಳಕೆ ಮತ್ತು ಖಾಯಿಲೆ ತಪಾಸಣೆ ಮಾಡುವ ರೀತಿಯನ್ನು ವಿವರಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಏನ್. ಗಫೂರ್, ಜಿಲ್ಲಾ ತರಬೇತಿಗಾರ ರಘುರಾಜ್ ಕದ್ರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ,ಪದ್ಮಶೇಕರ್ ಜೈನ್,ತಾಲೂಕ್ ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಲೂಕ್ ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಇಬ್ರಾಹಿಂ ನವಾಜ್ ಉಪಸ್ಥಿತರಿದ್ದರು.