
ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಕತ್ತು ಹಿಚುಕಿ ಪತ್ನಿಯನ್ನು ಕೊಲೆಗೈದು ಪತಿ ನೇಣಿಗೆ ಶರಣಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ತಿಮ್ಮಪ್ಪ ರಾಮ ಮೂಲ್ಯ (52) ಜಯಂತಿ (45) ಎಂದು ಗುರುತಿಸಲಾಗಿದೆ.
ಜೂ. 18ರಂದು ರಾತ್ರಿ ಜೂ.1 ಬೆಳಿಗ್ಗೆ 8-00 ನಡುವಿನ ಅವಧಿಯಲ್ಲಿ, ತಿಮ್ಮಪ್ಪ ರಾಮ ಮೂಲ್ಯ ಎಂಬವರು ತನ್ನ ಹೆಂಡತಿ ಜಯಂತಿ ಎಂಬವರೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಜಯಂತಿರವರಿಗೆ ಹಲ್ಲೆ ಮಾಡಿ, ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ.
ಬಳಿಕ ತಿಮ್ಮಪ್ಪ ಕೂಡಾ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಘಟನೆಗೆ ಸಂಬಂಧಿಸಿದಂತೆ, ಮೃತ ಜಯಂತಿರವರ ತಂಗಿ ಶ್ರೀಮತಿ ಸುಜಾತ ಫರಂಗಿಪೇಟೆ ಎಂಬವರ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 72/2025 U/S 103 BNS ಹಾಗೂ ಮೃತ ತಿಮ್ಮಪ್ಪರವರ ಅಣ್ಣ ಶ್ರೀ ವಿಶ್ವನಾಥ (55) ಸಜೀಪ ಮೂಡ, ಬಂಟ್ವಾಳರವರ ದೂರಿನ ಮೇರೆಗೆ UDR No 25/2025 U/S 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.