- Advertisement -
- Advertisement -
ಬಂಟ್ವಾಳ : ಬೆಂಗಳೂರು ನಗರದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವ ಕಾಣೆ ಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಲ್ಲಿ ದೂರು ದಾಖಲಾಗಿದೆ.
ಮೂಲತಃ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕುರ್ಮಾನ್ ನಿವಾಸಿ ಉದಯರಾಜ್ (26) ಎಂಬಾತ ಕಾಣೆಯಾಗಿರುವ ಯುವಕ.
ಉದಯರಾಜ್ ಅವರು ಬೆಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮನೆಗೆ ಬಂದು ಉಳಿದುಕೊಂಡಿದ್ದರು. ಲಾಕ್ ಡೌನ್ ಮುಕ್ತಾಯ ವಾದ ಬಳಿಕ ವಾಪಸು ಅಗಸ್ಟ್ ತಿಂಗಳಲ್ಲಿ ಬೆಂಗಳೂರಿಗೆ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದರು.
ಹೋದ ಬಳಿಕ ದೂರವಾಣಿ ಸಂಪರ್ಕ ದ ಮೂಲಕ ತಾಯಿ ಹಾಗೂ ಮನೆಯವರೊಂದಿಗೆ ಮಾತನಡಿಕೊಂಡಿದ್ದ ಉದಯರಾಜ್ ಫೆ.20 ರ ಬಳಿಕ ಸಂಪರ್ಕಕ್ಕೆ ಸಿಗದೆ ಪೋನ್ ಸ್ವಿಚ್ ಆಪ್ ಬರುತ್ತಿದೆ.
ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ವಿಚಾರಿಸಿದಾಗ ಅಲ್ಲಿಯೂ ಇಲ್ಲ , ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವ ಬಗ್ಗೆ ಈತನ ಅಣ್ಣ ಯುವರಾಜ್ ಅವರು ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
- Advertisement -