Friday, April 26, 2024
spot_imgspot_img
spot_imgspot_img

ಬಂಟ್ವಾಳ ಉಪ ತಹಶೀಲ್ದಾರ್ ಶ್ರೀಧರ್ ಕೋಡಿಜಾಲ್ ನಿಧನ.

- Advertisement -G L Acharya panikkar
- Advertisement -

ಬಂಟ್ವಾಳ: ಬಂಟ್ವಾಳ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ್ ಕೋಡಿಜಾಲ್ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೂಲತಃ ತೆಂಕಿಲ ಕೋಡಿಜಾಲು ನಿವಾಸಿಯಾಗಿದ್ದ ಅವರು ಜಿಡೆಕಲ್ಲು ಸಮೀಪ ವಾಸ್ತವ್ಯ ಹೊಂದಿದ್ದರು. ಉಪ್ಪಿನಂಗಡಿ ಕಂದಾಯ ನಿರೀಕ್ಷಕರಾಗಿದ್ದ ವೇಳೆ ಅವರು ಪದ್ದೋನ್ನತಿ ಹೊಂದಿ ಪುತ್ತೂರು ಉಪತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಳಿಕ ಬಂಟ್ವಾಳಕ್ಕೆ ವರ್ಗಾವಣೆಗೊಂಡಿದ್ದರು. ಇತ್ತೀಚೆಗೆ ಕೋವಿಡ್-19 ಸಂದರ್ಭದಲ್ಲಿ ಕೊರೋನಾ ವಾರಿಯರ್‍ಸ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೆಂಕಿಲ ಆದಿ ನಾಗಬ್ರಹ್ಮ ಮೊಗೇರ್ಕಳ ಸೇವಾ ಸಮಿತಿಯ ಸಂಚಾಲಕರಾಗಿದ್ದ ಅವರು ಸದಾ ಸಾಮಾಜಿಕ ಚಟುವಟಿಕೆಯೊಂದಿಗೆ ಸಾರ್ವಜನಿಕರ ಒಡನಾಡಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!