- Advertisement -
- Advertisement -
ಬಂಟ್ವಾಳ: ಪಾಣೆಮಂಗಳೂರಿನ ಹಳೆ ಸೇತುವೆಯ ಮೇಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವರನ್ನು ಸ್ಥಳೀಯರು ಸೇರಿಕೊಂಡು ರಕ್ಷಿಸಿದ ಘಟನೆ ನಡೆದಿದೆ.
ಕುದ್ದುಪದವು ಚೆಲ್ಲಡ್ಕ ನಿವಾಸಿ ನಾರಾಯಣ ನಾಯ್ಕ(70) ಎಂಬುವವರು ಪಾಣೆಮಂಗಳೂರು ಹಳೆ ಸೇತುವೆ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನ ನಡೆಸಿದ್ದರು. ಆದರೆ ಸ್ಥಳದಲ್ಲಿದ್ದ ಯುವಕರು ಸೇರಿಕೊಂಡು ರಕ್ಷಣೆ ಮಾಡಿದ್ದಾರೆ.
ರಕ್ಷಣೆ ಮಾಡಿದ ಯುವಕರಲ್ಲಿ ಒಂದಾದ ಗಣೇಶ್ ಶೆಟ್ಟಿ ಕಲ್ಲಡ್ಕ ಎಂಬುವವರು ವಿ.ಟಿವಿಗೆ ಮಾಹಿತಿಯನ್ನು ತಲುಪಿಸಿದ್ದಾರೆ. ನಮ್ಮ ತಂಡ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಊರಿನ ಗಣ್ಯರಾದ ರಾಧಾಕೃಷ್ಣ ಚೆಲ್ಲಡ್ಕ ಹಾಗೂ ರಾಜೀವ್ ಭಂಡಾರಿ ಅವರನ್ನು ಸಂಪರ್ಕಿಸಿ ವ್ಯಕ್ತಿಯ ಮಗನಿಗೆ ವಿಷಯವನ್ನು ತಿಳಿಸಿ, ತಂದೆಯನ್ನು ಮಗನಿಗೆ ಒಪ್ಪಿಸಿದ ಕಾರ್ಯ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಯುವಕರಿಗೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.
- Advertisement -