- Advertisement -
- Advertisement -





ಬಂಟ್ವಾಳ: ಯಕ್ಷಗಾನ ಲೋಕದ ಅಪ್ರತಿಮ ಕಲಾತಪಸ್ವಿ, ತೆಂಕುತಿಟ್ಟು ಶೈಲಿಯ ಹಿರಿಯ ವಿದ್ವಾಂಸ ಮತ್ತು ಕಳೆದ ಐದು ದಶಕಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಆಧಾರಸ್ತಂಭವಾಗಿದ್ದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು ವಿಧಿವಶರಾಗಿದ್ದಾರೆ.
1940, ಮಾರ್ಚ್ 22ರಂದು ಬಂಟ್ವಾಳದ ಕೋಡಪದವಿನ ಕಡು ಬಡತನದಲ್ಲಿ ಜನಿಸಿದ ಗೋವಿಂದರು, ಕಳೆದ 50 ವರ್ಷಗಳಿಗೂ ಹೆಚ್ಚು ಕಾಲ ಧರ್ಮಸ್ಥಳ ಮೇಳದಲ್ಲಿ ಸೇವೆ ಸಲ್ಲಿಸಿದ್ದರು. ಇಳಿ ವಯಸ್ಸಿನಲ್ಲೂ ರಂಗಭೂಮಿಯ ಮೇಲಿನ ಮೋಹ ಬಿಟ್ಟವರಲ್ಲ.
ರಂಗಸ್ಥಳದ ಮೇಲೆ ಕೌರವ, ಕರ್ಣನಂತಹ ಗಂಭೀರ ಪಾತ್ರಗಳಿಗೆ ಜೀವ ತುಂಬುತ್ತಿದ್ದ ಅವರ ಅಭಿನಯ ಮತ್ತು ಮಾತುಗಾರಿಕೆ ಅನನ್ಯವಾಗಿತ್ತು. ಯಕ್ಷಗಾನದ ಹೆಜ್ಜೆಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಅವರು ಹೊಸ ಮನ್ವಂತರವನ್ನೇ ಸೃಷ್ಟಿಸಿದ್ದರು. ಅವರ ನಿಧನದಿಂದ ಯಕ್ಷಗಾನ ರಂಗದ ಒಂದು ಸುವರ್ಣ ಯುಗವೇ ಅಂತ್ಯಗೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕಲಾಭಿಮಾನಿಗಳು ಮತ್ತು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
- Advertisement -








