Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಬಸ್‌‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಿಂದ ನಗ-ನಗದು ಕಳವು; ಪ್ರಕರಣ ದಾಖಲು..!

- Advertisement -
- Advertisement -

ಬಂಟ್ವಾಳ: ಬಕೆಎಸ್‌ಆರ್‌ಟಿಸಿ ಬಸ್‌‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಅಂದಾಜು 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಯಲಹಂಕ ಉಪನಗರ ನಿವಾಸಿ ರಾಜಗೋಪಾಲ್ ಕಾರಂತ ಎಂಬವರ ದೂರಿನಂತೆ ತಮ್ಮ ಪತ್ನಿಯ ತವರು ಮನೆಯಾದ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ್‌ಗೆ ಖಾಸಗಿ ಕುಟುಂಬದ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಫೆಬ್ರವರಿ 1 ರಂದು ರಾತ್ರಿ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಪತ್ನಿ ಮತ್ತು ಅಳಿಯನೊಂದಿಗೆ ಮನೆಯಿಂದ ಚಿನ್ನವನ್ನು ಬಾಕ್ಸನಲ್ಲಿ ಇಟ್ಟುಕೊಂಡು ಅದರ ಜೊತೆಯಲ್ಲಿ 3000 ರೂ ಹಣವನ್ನು ತಮ್ಮ ಲಗೇಜು ಬ್ಯಾಗ್ ನಲ್ಲಿರಿಸಿ ಹೊರಟಿದ್ದಾರೆ.

ಪ್ರಯಾಣದ ವೇಳೆ ಕುಣಿಗಲ್ ಬಳಿ ಬಸ್ ನಿಲ್ಲಿಸಿದಾಗ ರಾಜಗೋಪಾಲ್ ಅವರ ಹೆಂಡತಿ ಮತ್ತು ಅಳಿಯ ಚಿನ್ನಾಭರಣ ಹಾಗೂ ನಗದು ಹಣವಿದ್ದ ಬ್ಯಾಗ್‌‌ಗಳನ್ನು ಬಸ್ಸಿನಲ್ಲಿಯೇ ಇಟ್ಟು ಶೌಚಾಲಯಕ್ಕೆ ಹೋಗಿರುತ್ತಾರೆ. ಫೆ.2 ರಂದು ಮುಂಜಾನೆ ಬಸ್ ವಗ್ಗ ಕಾರಿಂಜಾ ಕ್ರಾಸ್ ತಲುಪಿದಾಗ ಬಸ್ಸಿನಿಂದ ಕೆಳಗೆ ಇಳಿದು, ಅಲ್ಲಿಯೇ ಬಸ್ ನಿಲ್ದಾಣದ ಪಕ್ಕದಲ್ಲಿ ಬ್ಯಾಗನ್ನು ತೆರೆದು ನೋಡಿದಾಗ ಒಟ್ಟು 144 ಗ್ರಾಂ ಚಿನ್ನ ಅಂದಾಜು ಮೌಲ್ಯ 10,08,000/- ಹಾಗೂ ರೂ 3000/- ನಗದು ಕಳ್ಳತನ ವಾಗಿರುವುದು ತಿಳಿದುಬಂದಿರುತ್ತದೆ. ಬಸ್‌‌ನಲ್ಲಿ ಅಥವಾ ಕುಣಿಗಲ್‌ನ ಹೋಟೆಲ್ ಬಳಿ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂಬ್ರ : 09/2025 ಕಲಂ : 303(2), 305(b) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!