- Advertisement -
- Advertisement -
ಸ್ಕೂಟರ್ ಮತ್ತು ಕಾರು ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರುನಲ್ಲಿ ನಡೆದಿದೆ.
ಅಬೂಬಕ್ಕರ್ ಕೋಡಿಜಾಲ್ ಎಂಬವರು ತಮ್ಮ ಸ್ಕೂಟರ್ನಲ್ಲಿ ನರಿಕೊಂಬು ಎಂಬಲ್ಲಿ ಅಡಿಕೆ ತೋಟವೊಂದರ ಅಡಿಕೆಯ ವ್ಯವಹಾರ ಕುದುರಿಸಿದ್ದು, ಅಲ್ಲಿ ಹೋಗಿಬರುತ್ತಿದ್ದ ವೇಳೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಕಂದೂರು ಎಂಬಲ್ಲಿಗೆ ತಲುಪುತ್ತಿದ್ದಂತೆ ಮುಡಿಪು ಕಡೆಯಿಂದ ನಿರ್ಲಕ್ಷ್ಯತನದಿಂದ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಪರಿಣಾಮ ಸ್ಕೂಟರ್ ಸವಾರ ಅಬೂಬಕ್ಕರ್ ಕೋಡಿಜಾಲ್ ರವರಿಗೆ ಗಾಯಗಳಾಗಿದೆ.
ಅವರನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ತಿಳಿದು ಬಂದಿದೆ.
- Advertisement -