Saturday, May 11, 2024
spot_imgspot_img
spot_imgspot_img

ಬಂಟ್ವಾಳ : ಮನೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ.ನಷ್ಟ

- Advertisement -G L Acharya panikkar
- Advertisement -

ಬಂಟ್ವಾಳ : ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಚೆನೈತ್ತೋಡಿ ಗ್ರಾಮದ ವಾಮದಪದವಿನಲ್ಲಿ ನಡೆದಿದೆ.

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ವಾಮದಪದವು ಸಮೀಪದ ಕಡ್ತಲಬೆಟ್ಟು ಕೋಡಿಬಾಕಿಮಾರ್ ಎಂಬಲ್ಲಿ ಸುಧಾಕರ್ ಶೆಟ್ಟಿ ಎಂಬವರ ಮನೆಗೆ ಮಧ್ಯ ರಾತ್ರಿ 12.30 ರ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸುಮಾರು 2 ಲಕ್ಷಕ್ಕೂ ಅಧಿಕ ರೂ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಮನೆಯಲ್ಲಿ ಮಲಗಿದ್ದವರಿಗೆ ಕೂಡಲೇ ಎಚ್ಚರವಾದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಮನೆಯ ಒಂದು ಪಾರ್ಶ್ವಭಾಗ ಬೆಂಕಿಗೆ ಅಹುತಿಯಾಗಿದೆ. ಕೂಡಲೇ ಸ್ಥಳೀಯ ಯುವಕರ ಸಹಾಯದಿಂದ ನೀರು ಹಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡಲಾಗಿದೆ. ಹಾಗಾಗಿ ಹೆಚ್ಚಿನ ಅನಾಹುವನ್ನು ತಪ್ಪಿಸಲಾಗಿದೆ. ಮನೆಯ ಅಡುಗೆ ತಯಾರಿಸುವ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರೊಳಗೆ ದಾಸ್ತಾನು ಮಾಡಲಾಗಿದ್ದ ಒಣ ಅಡಿಕೆ ಮತ್ತು ಬೆಲೆಬಾಳುವ ಮರದ ಸೊತ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ತಾಲೂಕಿನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!