- Advertisement -
- Advertisement -




ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯನ್ನು ಬಾಳ್ತಿಲ ಗ್ರಾಮ ಬಂಟ್ವಾಳ ತಾಲೂಕು ಕುರ್ಮಾನು ನಿವಾಸಿ ಇಬ್ರಾಹಿಂ ಖಲೀಲ್ (27) ಎಂದು ಗುರುತಿಸಲಾಗಿದೆ.
ಬಂಟ್ವಾಳ ನಗರ ಠಾಣಾ ಅ.ಕ್ರ.36/2016 ಕಲಂ: 143.144.147.148.154.341.353.504.323.324.160.ಜೊತೆಗೆ 149 ಐ.ಪಿ.ಸಿ ಪ್ರಕರಣದಲ್ಲಿ, ಆರೋಪಿಯಾದ ಇಬ್ರಾಹಿಂ ಖಲೀಲ್ ಎಂಬಾತನ ವಿರುದ್ದ, ನ್ಯಾಯಾಲಯವು ವಾರಂಟ್ ಹೊರಡಿಸಿದ್ದು, ಅದರಂತೆ ಆತನನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.
- Advertisement -