- Advertisement -
- Advertisement -
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಧರ್ಮಸ್ಥಳ ಭಂಟಾರಿಬೆಟ್ಟು ಎಸ್ಕೇಪ್ ರಸ್ತೆಯ ತಿರುವುನಲ್ಲಿ ನಡೆದಿದೆ.
ಅಪಘಾತದ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಕಕ್ಯೆಪದವು ನಿವಾಸಿ ಕಷ್ಟಮಯ್ಯ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಜೊತೆ ಸಹ ಸವಾರ ಸಹೋದರ ಸೂರ್ಯನಾರಾಯಣ ಮಯ್ಯ ಅಪಾಯವಿಲ್ಲದ ಪಾರಾಗಿದ್ದಾರೆ.
ಬಂಟ್ವಾಳ ಬೈಪಾಸ್ ರಸ್ತೆಯಿಂದ ಬಂಟ್ವಾಳ ಪೇಟೆಗೆ ಭಂಡಾರಿ ಬೆಟ್ಟು ಎಂಬಲ್ಲಿಂದ ಎಸ್ಕೇಪ್ ರೋಡ್ ಕ್ರಾಸ್ ಮಾಡುವ ವೇಳೆ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಆಲ್ಟೋ ಕಾರು ಹಿಂಬದಿಯಿಂದ ಬೈಕ್ಗೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಬೈಕ್ ಸವಾರರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
- Advertisement -