Saturday, May 18, 2024
spot_imgspot_img
spot_imgspot_img

ಮಂಗಳೂರು: ಬೈಕ್-ಖಾಸಗಿ ಬಸ್ಸು ಡಿಕ್ಕಿ; ಸವಾರ ಮೃತ್ಯು

- Advertisement -G L Acharya panikkar
- Advertisement -

ಮಂಗಳೂರು: ಖಾಸಗಿ ಬಸ್ ಡಿಕ್ಕಿಯಾಗಿ ಕರಿಯಂಗಳದ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಕರಿಯಂಗಳ ನಿವಾಸಿ ದಿ.ಅಣ್ಣಿಪೂಜಾರಿ ಅವರ ಮಗ ಸಂತೋಷ್ ಎಂಬವರು ಮೃತಪಟ್ಟ ವ್ಯಕ್ತಿ. ವಾಮಂಜೂರು ವಿ.ಎಸ್.ಎಸ್.ಬ್ಯಾಂಕಿನಲ್ಲಿ ಉದ್ಯೋಗಿಯಾಗಿದ್ದು, ಈತ ಕರಿಯಂಗಳ ಮನೆಯಿಂದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಮೂಡಬಿದಿರೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಜೀವನ್ ಜ್ಯೋತಿ ಖಾಸಗಿ ಬಸ್ ಡಿಕ್ಕಿಯಾಗಿದೆ.

ಈತ ಕೆಲಸ ಮಾಡುವ ವಾಮಂಜೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಶಾಖೆಯಾಗಿರುವ ಗುರುಪುರದ ಬ್ಯಾಂಕ್ ನ ಎದುರು ಈ ದುರ್ಘಟನೆ ನಡೆದಿದೆ.

- Advertisement -

Related news

error: Content is protected !!