Sunday, April 28, 2024
spot_imgspot_img
spot_imgspot_img

ಬಂಟ್ವಾಳ: ಸ್ಕೂಟರ್ ಗೆ ಕಾರು ಡಿಕ್ಕಿ; ಸವಾರ ಗಾಯ..!

- Advertisement -G L Acharya panikkar
- Advertisement -

ಬಂಟ್ವಾಳ: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರನಿಗೆ ಗಾಯಗೊಂಡ ಘಟನೆ ಬಂಟ್ವಾಳ ಬಿಸಿರೋಡಿನ ನಲ್ಕೆಮಾರ್ ಎಂಬಲ್ಲಿ ನಡೆದಿದೆ.

ಗಾಯಗೊಂಡ ವ್ಯಕ್ತಿ ಬೆಂಜನಪದವು ನಿವಾಸಿ ಪುರುಷೋತ್ತಮ ಆಚಾರ್ಯ ಎಂದು ಗುರುತಿಸಲಾಗಿದೆ.

ಪುರುಷೋತ್ತಮ ಅವರು ತಮ್ಮ ದ್ವಿಚಕ್ರವಾಹನದಲ್ಲಿ ಬೆಂಜನಪದವುವಿನಿಂದ ಬಿಸಿರೋಡು ಕಡೆಗೆ ಬರುತ್ತಿರುವ ವೇಳೆ ಕೈಕಂಬ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗಾಯಗೊಂಡ ಪುರುಷೋತ್ತಮ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅಮ್ಟಾಡಿ ಗ್ರಾಮದ ನಲ್ಕೆಮಾರ್ ದ್ವಾರದ ಬಳಿ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ‌ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!