Sunday, May 19, 2024
spot_imgspot_img
spot_imgspot_img

ಬಂಟ್ವಾಳ: ಅಕ್ರಮವಾಗಿ ಪಡಿತರ ಅಕ್ಕಿ ಚೀಲಗಳ ಸಾಗಾಟ ಮಾಡುತ್ತಿದ್ದಾತನ ಬಂಧನ; 2ಟನ್ ಅಕ್ಕಿ ಹಾಗೂ ವಾಹನ ವಶಕ್ಕೆ

- Advertisement -G L Acharya panikkar
- Advertisement -
driving

ಬಂಟ್ವಾಳ: ಪಡಿತರ ಅಕ್ಕಿ ಚೀಲಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಬಾಳ್ತಿಲದ ಕೊಡಂಗೆಕೋಡಿಯಲ್ಲಿ ನಡೆದಿದೆ.

ಆರೋಪಿಯನ್ನು ಬಂಟ್ವಾಳ ತಾಲೂಕಿನ ಸಜೀಪ ನಡು ಬಸ್ತಿಗುಡ್ಡೆ ನಿವಾಸಿ ನೌಫಲ್ ಭಿನ್ ಯೂಸೂಫ್ (26) ಎಂದು ಗುರುತಿಸಲಾಗಿದೆ.

ಗೂಡ್ಸ್ ಕ್ಯಾರಿಯರ್ ವಾಹನದಲ್ಲಿ ಪಡಿತರ ಅಕ್ಕಿ ಚೀಲಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಆಹಾರ ನಿರೀಕ್ಷಕರಾದ ರಾಜ್ ಕುಮಾರ್ ರವರು ವಾಹನವನ್ನು ತಡೆದು ತಪಾಸಣೆ ನಡೆಸಿದ್ದು, ಈ ಸಂದರ್ಭದಲ್ಲಿ 50 ಕೆ.ಜಿ. ಯ 40 ಗೋಣಿಗಳು (2ಟನ್) ಕಂಡು ಬಂದಿದ್ದು, ಅವುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದುಕೊಂಡು ಹಾಗೂ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಯ ವಿರುದ್ಧ ಠಾಣೆಯಲ್ಲಿ 109/2021 ಕಲಂ: 3,7 essential commodites ACT, 1955 ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!