- Advertisement -
- Advertisement -





ಬಂಟ್ವಾಳ: ದ್ವಿಚಕ್ರ ಸವಾರರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಕಾಯರ್ಪಡ್ಪು ಬಳಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಆಕ್ಟಿವಾ ಸವಾರ ಮುಡಿಪು ಇನ್ಫೋಸಿಸ್ ಸೆಕ್ಯೂರಿಟಿ ಸಿಬ್ಬಂದಿ, ಪುತ್ತೂರು ನೆಹರು ನಗರದ ಕಲ್ಲೆಗದ ರಕ್ತೇಶ್ವರಿ ಗುಡಿ ಹಿಂಬದಿಯ ನಿವಾಸಿ ಚಿದಾನಂದ ಕಾಮತ್ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಈ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಬಂಟ್ವಾಳ ಆಸ್ಪತ್ರಗೆ ದಾಖಲಿಸಲಾಗಿತ್ತು. ಈ ವೇಳೆ ಸ್ಥಳದಲ್ಲೇ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ನಿವೃತ್ತ ಸೈನಿಕ ಚಿದಾನಂದ ಕಾಮತ್ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಬಂಟ್ವಾಳ ಸಂಚಾರಿ ಠಾಣೆಯಲ್ಲಿ 304(A) ಪ್ರಕರಣ ದಾಖಲಾಗಿದೆ.
- Advertisement -