Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ; ಮೂವರು ಯುವಕರ ವಿರುದ್ದ ಪ್ರಕರಣ ದಾಖಲು..!

- Advertisement -
- Advertisement -

ಬಂಟ್ವಾಳ: ಮೂವರು ಯುವಕರು ಮಾದಕ ವಸ್ತು ಸೇವನೆ ಮಾಡಿ ನಶೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಘಟನೆ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ ನಡೆದಿದೆ.

ಮಾದಕ ವಸ್ತು ಸೇವಿಸಿದವರನ್ನು ನಂದಾವರ ಕೋಟೆ ಸಜಿಪಮುನ್ನೂರು ಗ್ರಾಮ, ಬಂಟ್ವಾಳ ನಿವಾಸಿ ಮಹಮ್ಮದ್‌ ರಾಫಿದ್‌(19), ಮೂಡ ಗ್ರಾಮ, ಬಂಟ್ವಾಳ ಮಹಮ್ಮದ್‌ ಇರ್ಷಾದ್‌(23), ಮಂಚಿ ಗ್ರಾಮ ಬಂಟ್ವಾಳ ದಾವುದುಲ್‌ ಅಮೀರ್‌ (26) ಎಂದು ಗುರುತಿಸಲಾಗಿದೆ.

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕುಕ್ಕಾಜೆ ಸಾರ್ವಜನಿಕ ಸ್ಥಳದಲ್ಲಿ ಮೂವರು ಯುವಕರು ಮಾದಕ ವಸ್ತು ಸೇವನೆ ಮಾಡಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು. ಈ ಬಗ್ಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ 112 ಸಹಾಯವಾಣಿಯ ಪೊಲೀಸರು ತೆರಳಿ, ಪರಿಶೀಲಿಸಿದಾಗ ಮೂವರು ಆಸಾಮಿಗಳು ಮಾದಕ ವಸ್ತು ಸೇವನೆ ಮಾಡಿರುವಂತೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಠಾಣೆಗೆ ಕರೆತಂದು ವಿಚಾರಿಸಲಾಯಿತು.

ಈ ಮೂವರು ಯುವಕರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ನಿಷೇದಿತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ 76/2024, ಕಲಂ : 27 (b) NDPS ACT -1985 ರಂತೆ‌ ಪ್ರಕರಣ ದಾಖಲಿಸಲಾಗಿರುತ್ತದೆ.

- Advertisement -

Related news

error: Content is protected !!