





ಬಂಟ್ವಾಳ: ಅಕ್ರಮವಾಗಿ ಜುಗಾರಿ ಆಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ ನಡೆಸಿ 33 ಜನರನ್ನು ವಶಕ್ಕೆ ಪಡೆದು ಒರ್ವ ಪರಾರಿಯಾದ ಘಟನೆ ಬಂಟ್ವಾಳ ತಾಲೂಕು, ಬಡಗಬೆಳ್ಳೂರು ಗ್ರಾಮದ, ಬಡಗಬೆಳ್ಳೂರು ಎಂಬಲ್ಲಿ ನಡೆದಿದೆ.
ಡಿ.17 ರಂದು ಮುಂಜಾನೆ ವೇಳೆ ಬಂಟ್ವಾಳ ತಾಲೂಕು, ಬಡಗಬೆಳ್ಳೂರು ಗ್ರಾಮದ, ಬಡಗಬೆಳ್ಳೂರು ಎಂಬಲ್ಲಿ ನಿಶಾಂತ್ ಎಂಬವರ ಮನೆಯಲ್ಲಿ ಅಕ್ರಮವಾಗಿ ಜುಗಾರಿ ಆಟ ಆಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ ರವರು ಹಾಗೂ ಅಧಿಕಾರಿ/ಸಿಬ್ಬಂದಿಗಳ ತಂಡ ದಾಳಿ ನಡೆಸಿದ್ದು, ದಾಳಿ ವೇಳೆ ಸ್ಥಳದಲ್ಲಿ ಅಕ್ರಮವಾಗಿ “ಉಲಾಯಿ-ಪಿದಾಯಿ”ಎಂಬ ಜುಗಾರಿ ಆಟ ಆಡುತ್ತಿರುವುದು ಕಂಡುಬಂದಿದೆ.
ದಾಳಿ ವೇಳೆ ಜುಗಾರಿ ಆಟ ಆಡಿಸುತ್ತಿದ್ದ ಆರೋಪಿತ ನಿಶಾಂತ್ ಪರಾರಿಯಾಗಗಿದ್ದು, ಆಟದಲ್ಲಿ ನಿರತರಾಗಿದ್ದ ಒಟ್ಟು 33 ಜನರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಜುಗಾರಿ ಆಟಕ್ಕೆ ಬಳಸಿದ ನಗದು ರೂ. 7,81,420/-, ಇಸ್ಪೀಟ್ ಎಲೆಗಳು, ಸ್ಟೀಲ್ ಟೇಬಲ್, ಪ್ಲಾಸ್ಟಿಕ್ ಚೆಯರ್ ಹಾಗೂ ಇತರೆ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ. ಸ್ವಾಧೀನಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ ರೂ.7,90,220/- ಆಗಿರುತ್ತದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 112/2024 ಕಲಂ: 79,80 ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.