- Advertisement -
- Advertisement -
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ತಾಲೂಕಿನ ಸಜೀಪನಡು ಗ್ರಾಮದ ಬೈಲಗುತ್ತು ಎಂಬಲ್ಲಿ ಕೃತಕ ನೆರೆಗೆ ಮನೆಯೊಳಗೆ ನೀರು ಹೊಕ್ಕಿದೆ. ಜೆಸಿಬಿ ಯಂತ್ರ ಮೂಲಕ ಚರಂಡಿಯನ್ನು ಅಗಲ ಗೊಳಿಸಿ ಸರಾಗವಾಗಿ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಯಿತು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೋಣು ಪರೀಶೀಲನೆ ನಡೆಸಿದರು. ಈ ಸಂದರ್ಭ ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ್ ಮತ್ತಿಹಳ್ಳಿ ಸಿಬ್ಬಂದಿ ಅಶೋಕ್, ಶೀತಲ್ ಉಪಸ್ಥಿತರಿದ್ದರು.
- Advertisement -