- Advertisement -
- Advertisement -
ಬಂಟ್ವಾಳ : ಗ್ರಾಮಾಂತರ ಪೊಲೀಸ್ ಠಾಣೆಯ ಅ.ಕ್ರ 04/2004 ಕಲಂ: 147,148,504,447,427, 435, 324,326,307,506 r/w 149 IPC ಪ್ರಕರಣದ ಆರೋಪಿಗಳಾದ, ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮುಹಮ್ಮದ್ ಸಮೀವುಲ್ಲಾ (34) ಹಾಗೂ ಮಂಚಿ ಗ್ರಾಮದ ಕಂಚಿಲ ನಿವಾಸಿ ಇಬ್ರಾಹಿಂ (35) ಎಂಬವರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಗಳನ್ನು ಸೋಮವಾರ (ಫೆ 12) ಪಿಎಸ್ಸೆ ಮೂರ್ತಿ ಹಾಗೂ ಸಿಬ್ಬಂದಿಗಳಾದ ಕೃಷ್ಣ, ಯೋಗೇಶ್ ಡಿ ಎಲ್, ಪುನೀತ್ ಅವರ ತಂಡ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದ ವಿಧಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
- Advertisement -