- Advertisement -
- Advertisement -
ಬಂಟ್ವಾಳ : ಪರವಾನಿಗೆ ಇಲ್ಲದೆ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣ ಬೇಧಿಸಿ ಲಾರಿ ಸಹಿತ ಚಾಲಕನನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಂಟ್ವಾಳ ತಾಲೂಕು ಸಜಿಪ ಪೇಟೆಯಲ್ಲಿ ನಡೆದಿದೆ .
ಬಂಧಿತ ಲಾರಿ ಚಾಲಕನನ್ನು ಕಾಸರಗೋಡು ಜಿಲ್ಲೆಯ ಕುಂಜತ್ತೂರು ನಿವಾಸಿ ಮುಹಮ್ಮದ್ ಶಾಫಿ (28) ಎಂದು ಹೆಸರಿಸಲಾಗಿದೆ. ಸಜಿಪ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತ ಸಜಿಪದ ಹೊಳೆ ಬದಿಯಲ್ಲಿ ಮರಳು ಲೋಡ್ ಮಾಡಿ ಕಳಿಸಿರುವುದಾಗಿ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ.ನಂಬ್ರ 118/ 2023 ಕಲಂ: 379 ಐ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೋಡು ತನಿಖೆ ನಡೆಸಲಾಗುತ್ತಿದೆ.
- Advertisement -