Monday, June 30, 2025
spot_imgspot_img
spot_imgspot_img

ಬಂಟ್ವಾಳ: ನೇಣು ಬಿಗಿದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಬಂಟ್ವಾಳ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಜನಪದವುನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಎಂದು ಗುರುತಿಸಲಾಗಿದೆ.

ಬಡಕಬೈಲಿನ ಖಾಸಗಿ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ‌ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ಶಂಕಿಸಿದ್ದಾರೆ.

ಅಗಸ್ಟ್ 7 ರಂದು ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುವುದು ಗೊತ್ತಾಗಿದೆ.

ಕೂಡಲೇ ಬಾಲಕನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಪರೀಕ್ಷೆ ನಡೆಸಿದಾಗ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!