Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಸರ್ಕಾರಿ ಬಸ್ಸುಗಳಿಗಾಗಿ ದಿನವಿಡೀ ಕಾಯುವ ವಿದ್ಯಾರ್ಥಿಗಳ ಪರದಾಟ- ಫ್ರೀ ಬಸ್‌ ಬದಲು ಹೆಚ್ಚುವರಿ ಬಸ್‌ ವ್ಯವಸ್ಥೆ ಕಲ್ಪಿಸಿಕೊಡಿ: ಸಾರ್ವಜನಿಕರ ಆಕ್ರೋಶ

- Advertisement -
- Advertisement -

ದ ಕ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸರಕಾರಿ ಬಸ್‌ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶಾಲಾ ವಿದ್ಯಾರ್ಥಿಗಳು ದಿನವಿಡೀ ಬಸ್ಸಿಗಾಗಿ ಕಾಯುವ ಪರಿಸ್ಥಿತಿ ಎದುರಾಗಿದೆ. ಬಂಟ್ವಾಳ ತಾಲೂಕಿನ ಕೊಡಾಜೆಯಲ್ಲಿ ವಿದ್ಯಾರ್ಥಿಗಳು ಬಸ್ಸಿಗಾಗಿ ಕಾಯುವ ದೃಶ್ಯ ಕಂಡುಬಂದಿದ್ದು, ಜಿಲ್ಲೆಯಲ್ಲಿ ಪ್ರತೀ ದಿನ ಎಲ್ಲಾ ಕಡೆಗಳಲ್ಲಿ ಈ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಬಸ್‌ ಯಾಕಿಲ್ಲ ಎಂದು ಡಿಪೋ ಬಳಿ ವಿಚಾರಿಸಿದರೆ.. ಡ್ರೈವರ್‌ ಇಲ್ಲ, ಕಂಡಕ್ಟರ್‌ ಇಲ್ಲ ಎಂದು ಉತ್ತರ ನೀಡ್ತಾರೆ. ಇತ್ತ ಫ್ರೀ ಬಸ್ಸು ಎಂದು ಸರ್ಕಾರಿ ಬಸ್ಸಿಗಾಗಿ ಕಾದು ಕುಳಿತ ವಿದ್ಯಾರ್ಥಿನಿಯರು, ಮಹಿಳೆಯರು ದಿನವಿಡೀ ಬಸ್ಸಿಗಾಗಿ ಕಾಯುವುದೇ ರೂಢಿಯಾಗಿದೆ. ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಲ್ಲಿದ್ದು ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ದ ಕ ಜಿಲ್ಲೆಯಲ್ಲಿ ಹಳ್ಳಿ ಪ್ರದೇಶಗಳಿಗೆ ಕೇವಲ ಸರ್ಕಾರಿ ಬಸ್‌ಗಳನ್ನು ಮಾತ್ರ ಮೀಸಲಿಡಲಾಗಿದ್ದು, ಗಂಟೆಗೆ ಒಂದರಂತೆ ಸರ್ಕಾರಿ ಬಸ್ಸುಗಳು ಹಳ್ಳಿ ಮಾರ್ಗಗಳಲ್ಲಿ ಚಲಿಸುತ್ತವೆ. ಹಳ್ಳಿ ಕಡೆಯಿಂದ ದೂರದ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಇದೇ ಸರ್ಕಾರಿ ಬಸ್ಸುಗಳನ್ನು ಅವಲಂಬಿಸಿರುತ್ತಾರೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಬಸ್ಸುಗಳ ಸಂಖ್ಯೆ ಕಡಿಮೆಯಾಗಿ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಲು ಪರದಾಡುವ ಸ್ಥಿತಿ ಎದುರಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ಪರಿಣಾಮವಾಗಿ ಸರ್ಕಾರಿ ಬಸ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.. ಬಸ್ಸೇ ಇಲ್ಲ ಅಂದ್ಮೇಲೆ ಫ್ರೀ ಬಸ್‌ ಇದ್ದು ಏನು ಪ್ರಯೋಜನ? ಫ್ರೀ ಬಸ್‌ ಬದಲು ಹೆಚ್ಚುವರಿ ಬಸ್‌ ವ್ಯವಸ್ಥೆಯನ್ನು ಕಲ್ಪಿಸಿಕೊಡಿ, ಈ ಬಗ್ಗೆ ರಾಜ್ಯ ಮುಖ್ಯಮಂತ್ರಿಗಳು, ರಾಜ್ಯ ಸಾರಿಗೆ ಸಚಿವರು ಹಾಗೂ ದ ಕ ಜಿಲ್ಲಾಧಿಕಾರಿಯವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಾರ್ವಜನಿಕರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ, ಪರಿಹಾರ ಕಲ್ಪಿಸಿಕೊಡಬೇಕು, ಇಲ್ಲವಾದಲ್ಲಿ ಎಲ್ಲರೂ ಒಟ್ಟಾಗಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!