- Advertisement -
- Advertisement -






ಬಂಟ್ವಾಳ: ರೈಲ್ವೆ ಹಳಿಯ ಬದಿಯ ಪೊದೆಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ನೆತ್ತರಕೆರೆ ಸಮೀಪ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬಿಳಿನೆಲೆ ಗ್ರಾಮದ ನೆಟ್ಟಣ ನಿವಾಸಿ ದಿ. ಚಂದನ್ ಎಂಬವರ ಪುತ್ರ ಶಶಿಕುಮಾರ್ ಎಸ್(40) ಎಂದು ಗುರುತಿಸಲಾಗಿದೆ.
ಬಂಟ್ವಾಳ ನಗರ ಪೊಲೀಸರು ಹಾಗೂ ಮಂಗಳೂರು ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವ್ಯಕ್ತಿಯ ತಲೆಯ ಮೇಲೆ ಗಾಯವಾದ ಕುರುಹುಗಳು ಕಂಡುಬಂದಿದ್ದು, ರಕ್ತಸಿಕ್ತ ಮಾದರಿಯಲ್ಲಿರುವ ಶವವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಶಿಕುಮಾರ್ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ ಪತ್ನಿ ಜೊತೆ ವಾಸ್ತವ್ಯವಿರಲಿಲ್ಲ ಎಂದು ತಿಳಿದು ಬಂದಿದೆ.
- Advertisement -