Saturday, June 28, 2025
spot_imgspot_img
spot_imgspot_img

ಬಂಟ್ವಾಳ: ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ಉಳ್ಳಾಲದ ರೈಲು ಹಳಿಯಲ್ಲಿ ಪತ್ತೆ..!

- Advertisement -
- Advertisement -

ಬಂಟ್ವಾಳ: ಬ್ಯಾಂಕ್‌ಗೆ ಹೋಗಿ ಹಣ ಪಡೆದುಕೊಂಡು ಮನೆಗೆ ಬಂದ ಸಜೀಪ ಮುನ್ನೂರು ಗ್ರಾಮದ ನಾಗವಳಚ್ಚಿಲ್‌ನ ವೃದ್ಧರೊಬ್ಬರು ನ. 5ರಂದು ಮನೆಯಿಂದ ಹೊರ ಹೋದವರು ಮರಳಿ ಬಾರದೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ದಿನ ಉಳ್ಳಾಲದ ರೈಲು ಹಳಿಯಲ್ಲಿ ಪತ್ತೆಯಾದ ಮೃತದೇಹ ಅವರದ್ದೇ ಎಂದು ತಡವಾಗಿ ಬೆಳಕಿಗೆ ಬಂದಿದೆ.

ಮೃತಪಟ್ಟ ವ್ಯಕ್ತಿ ನಾಗವಳಚ್ಚಿಲ್ ನಿವಾಸಿ ಉಗ್ಗಪ್ಪ ಪೂಜಾರಿ (70) ಎಂದು ಗುರುತಿಸಲಾಗಿದೆ.

ಉಗ್ಗಪ್ಪ ಪೂಜಾರಿ ನ. 5ರಂದು ಪಾಣೆಮಂಗಳೂರಿನ ಬ್ಯಾಂಕ್‌ಗೆ ಹೋಗಿ ತನ್ನ ವೃದ್ಧಾಪ್ಯ ವೇತನ ಪಡೆದುಕೊಂಡು ವಾಪಸ್ಸು ಮನೆಗೆ ಬಂದಿದ್ದರು. ಬಳಿಕ ತನ್ನ ಸೊಸೆಗೆ ಕರೆ ಮಾಡಿ ಏನು ವಿಷಯವನ್ನು ತಿಳಿಸಲು ಯತ್ನಿಸಿ ಕರೆಯನ್ನು ಕಟ್ ಮಾಡಿದ್ದಾರೆ. ಮತ್ತೆ ಸೊಸೆ ತಿರುಗಿ ಪೋನ್ ಮಾಡಿದಾಗ ಪೋನ್ ರಿಸೀವ್ ಮಾಡದೆ ನಾಪತ್ತೆಯಾಗಿದ್ದರು.

ಉಗ್ಗಪ್ಪ ಅವರು ಮೊಬೈಲ್ ಕೂಡ ಮನೆಯಲ್ಲೇ ಬಿಟ್ಟು ಹೋಗಿದ್ದರು. ಎಲ್ಲ ಕಡೆ ಉಗ್ಗಪ್ಪ ಅವರನ್ನು ಹುಡುಕಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರ ಪುತ್ರ ಅನಿಲ್ ಕುಮಾರ್ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇನ್ನು ಅದೇ ದಿನ ಉಳ್ಳಾಲ ರೈಲು ಹಳಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಅದರ ವಾರಸುದಾರರು ಸಿಗದ ಹಿನ್ನೆಲೆಯಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಗುರುವಾರ ಉಗ್ಗಪ್ಪ ಅವರ ಮನೆಯವರು ಬಂದು ಮೃತದೇಹವನ್ನು ಅವರದ್ದೇ ಎಂದು ಖಚಿತಪಡಿಸಿದ್ದಾರೆ. ಈ ಬಗ್ಗೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!