Friday, May 10, 2024
spot_imgspot_img
spot_imgspot_img

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೃತದೇಹ ಪತ್ತೆ..!!

- Advertisement -G L Acharya panikkar
- Advertisement -
vtv vitla

ಬಂಟ್ವಾಳ: ಪಾಣೆಮಂಗಳೂರು ಸೇತುವೆಯ ಮೇಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಬಂಟ್ವಾಳ ‌ತಾಲೂಕಿನ‌ ಕಲ್ಲಡ್ಕ ಸಮೀಪದ ನೆಟ್ಲ ನಿವಾಸಿ ಪ್ರವೀಣ್ ಕುಲಾಲ್ ಆತ್ಮಹತ್ಯೆ ‌ಮಾಡಿಕೊಂಡ ವ್ಯಕ್ತಿ.

ಪ್ರವೀಣ್ ಮಾನಸಿಕ ರೋಗದಿಂದ ಬಳಲುತ್ತಿದ್ದು, ಆತ್ಮಹತ್ಯೆಗೆ ಇದೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮೆಕಾನಿಕ್‌ ಕೆಲಸ ಮಾಡುತ್ತಿದ್ದ ಈತ ಎರಡು ದಿನಗಳಿಂದ ಮಾನಸಿಕವಾಗಿ ನೊಂದುಕೊಂಡು ತಿರುಗಾಡುತ್ತಿದ್ದ ಎಂದು ಆತನ ಸ್ನೇಹಿತರು ತಿಳಿಸಿದ್ಧಾರೆ.

ಅದಲ್ಲದೆ ಇವತ್ತು ಆತ್ಮಹತ್ಯೆ ಮಾಡಿಕೊಳ್ಳುವ ಕೆಲವೇ ಗಂಟೆಗಳ ಮುನ್ನ ನೆಟ್ಲ ಭಾಗದ ಆತನ ಸ್ನೇಹಿತರ ವ್ಯಾಟ್ಸ್ ಆಪ್ ಗ್ರೂಪ್ ನಲ್ಲಿ ಸಾಯುವ ಬಗ್ಗೆ ಪೋಸ್ಟ್ ಮಾಡಿದ್ದ. ಪೋಸ್ಟ್ ನೋಡಿದ ಈತನ ಸ್ನೇಹಿತರು ಕೂಡಲೇ ಈತತನ್ನು ಸಂಪರ್ಕ ಮಾಡುವ ಪ್ರಯತ್ನ ಮಾಡಿದ್ದಾರೆ,ಆದರೆ ಈತ ಯಾರ ಪೋನ್ ಕೂಡ ರಿಸೀವ್ ಮಾಡಲಿಲ್ಲ.ಇದರ ಜೊತೆಗೆ ಪೋಲಿಸರಿಗೆ ಮೌಖಿಕ ದೂರು ನೀಡಿ ಈತ ಇರುವ ವ್ಯಾಪ್ತಿಯನ್ನು ಗುರುತಿಸಿ ತಿಳಿಸುವಂತೆ ಮನವಿ ಮಾಡಿಕೊಂಡಿದ್ದರು.

- Advertisement -

Related news

error: Content is protected !!