- Advertisement -
- Advertisement -





ಬಂಟ್ವಾಳ: ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಘಟನೆ ಸರಪಾಡಿಯ ಹಂಚಿಕಟ್ಟೆಯಲ್ಲಿ ನಡೆದಿದೆ. ಇದೀಗ ಈ ಯುವಕನ ಕುರಿತು ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.
ಮಗುವನ್ನು ರಕ್ಷಿಸಿದ ಯುವಕ ಉಮೇಶ್ ಮಠದಬೆಟ್ಟು ಹಾಗೂ ಬಾವಿಗೆ ಬಿದ್ದ ಮಗು ನೋಣಯ್ಯ ನಾಯ್ಕ ಅವರ ಪುತ್ರ ಅಭಿಷೇಕ್ (3) ಎಂದು ಗುರುತಿಸಲಾಗಿದೆ.
ಹಂಚಿಕಟ್ಟೆಯ ನೋಣಯ್ಯ ನಾಯ್ಕ ಅವರ ಮನೆಯ ಅಂಗಳದಲ್ಲಿ ಬಾವಿಯೊಂದಿದ್ದು, ಅದಕ್ಕೆ ಕಸ ಬೀಳದಂತೆ ಹಸಿರು ಬಣ್ಣದ ನರ್ಸರಿ ಕಟ್ಟಿದ್ದರು. ಮೇ 14ರಂದು ಸಂಜೆ 6ರ ಸುಮಾರಿಗೆ ಅವರ ಪುತ್ರ ಅಭಿಷೇಕ್ (3) ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದನು. ತಾಯಿ ಮನೆಯೊಳಗೆ ಇದ್ದು, ತಂದೆ ನೋಣಯ್ಯ ಅವರು ಕೆಲಸ ಮುಗಿಸಿ ಬಂದು ಹೊರಗೆ ಹೋಗಿದ್ದರು. ಆಡುತ್ತಿದ್ದ ಅಭಿಷೇಕ್ ಬಾವಿಯ ಕಟ್ಟೆಯನ್ನು ಹತ್ತಿ ಹಸಿರು ಬಣ್ಣದ ನರ್ಸರಿ ಹೋಗಿದ್ದು, ಮಧ್ಯಕ್ಕೆ ತಲುಪುವ ವೇಳೆ ಅದು ಭಾರದಿಂದ ಹರಿದಿದೆ. ಈ ವೇಳೆ ಮಗು ಏಕಾಏಕಿ ಬಾವಿಗೆ ಬಿದ್ದಿದೆ.
- Advertisement -