Sunday, June 29, 2025
spot_imgspot_img
spot_imgspot_img

ಬಂಟ್ವಾಳ: ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.)ದಕ್ಷಿಣ ಕನ್ನಡ ಕರ್ನಾಟಕ ವತಿಯಿಂದ ಅನಾರೋಗ್ಯ ಪೀಡಿತ ಕುಟುಂಬಕ್ಕೆ ಧನ ಸಹಾಯ

- Advertisement -
- Advertisement -

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ವಿಠಲ ಕೋಡಿ ಎಂಬಲ್ಲಿ ಪತ್ನಿ ಮತ್ತು ಮಗಳ ಜೊತೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಜಯರಾಮ ನಾಯ್ಕ್ ಎಂಬವರು ಮೆದುಳಿನ ಸಮಸ್ಯೆಯಿಂದ ಬಳಲುತ್ತಿದ್ದು ಮನೆಗೆ ಆಧಾರವಾಗಿದ್ದ ಇವರು ಇದೀಗ ಅನಾರೋಗ್ಯಕ್ಕೆ ಒಳಗಾಗಿ ಯಾವುದೇ ಆದಾಯದ ಮೂಲ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಇವರ ಚಿಕಿತ್ಸೆಗೆ ಆರ್ಥಿಕ ಪರಿಸ್ಥಿತಿ ಎದುರಾಗಿದ್ದರಿಂದ ಮಾಸಿಕ ಸೇವಾ ಯೋಜನೆಯಲ್ಲಿ ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ದಕ್ಷಿಣ ಕನ್ನಡ, ಕರ್ನಾಟಕ ವತಿಯಿಂದ 20,000/- ರೂ . ಧನ ಸಹಾಯವನ್ನು ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರು ಸಚಿನ್ ರೈ ಮಾಣಿಗುತ್ತು, ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ಸಂಚಾಲಕ ನರಸಿಂಹ ಶೆಟ್ಟಿ ಮಾಣಿ, ಶ್ರೀ ಶಾರದಾ ಯುವ ವೇದಿಕೆ ಮಾಣಿ ಇದರ ಭರತ್ ಶೆಟ್ಟಿ ಮಾಣಿ, ಕೋಡಿ ಫ್ರೆಂಡ್ಸ್ ಮಾಣಿ ಇದರ ಕಾರ್ಯಕರ್ತರು ಹಾಗೂ ಟ್ರಸ್ಟ್ ನ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!