- Advertisement -
- Advertisement -
ಬಂಟ್ವಾಳ: ಯುವಕನೊಬ್ಬನನ್ನು ಮಾರಕಾಸ್ತ್ರದಿಂದ ಕಡಿದು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ವೈಯ್ಯಕ್ತಿಕ ದ್ವೇಷದಿಂದ ಈ ಕೃತ್ಯ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕಕ್ಯೆಪದವು ನಿವಾಸಿ ಸಿದ್ಧೀಕ್ ಎಂಬಾತ ರಫೀಕ್ ಎಂ0ಬಾತನನ್ನು ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.
ಕೊಲೆಯಾದ ಯುವಕ ರಫೀಕ್ (26) ಎಂದು ಗುರುತಿಸಲಾಗಿದೆ. ಕೊಲೆಗೆ ವೈಯಕ್ತಿಕ ಕಾರಣವೆನ್ನಲಾಗುತ್ತಿದ್ದು ಇದೀಗ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ತನಿಖೆ ಮುಂದುವರಿದಿದೆ. ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
- Advertisement -