- Advertisement -
- Advertisement -
ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಆನೇಕಲ್ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಕವಿತಾ(24) ಮೃತ ದುರ್ದೈವಿ.
ಬಾಣಂತಿಗೆ ಇದೇ ತಿಂಗಳು 13ನೇ ತಾರೀಖು ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹೆರಿಗೆಗಾಗಿ ಆಸ್ಪತ್ರೆಗೆ ದಾಖಲು ಮಾಡಿಲಾಗಿತ್ತು. 14ನೇ ತಾರೀಖು ಆಪರೇಷನ್ ಮೂಲಕ ವೈದ್ಯರು ಹೆರಿಗೆ ಮಾಡಿಸಿದ್ದರು.
ಹೆರಿಗೆ ಆದ ಬಳಿಕ ಕವಿತಾ ತೀವ್ರ ರಕ್ತಸ್ರಾವದಿಂದ ಬಳಲಿದ್ದು, ಬಾಣಂತಿ ಕೊನೆಯುಸಿರೆಳೆದಿದ್ದಾರೆ. ಇನ್ನು ಆಸ್ಪತ್ರೆ ವಿರುದ್ಧ ಮೃತ ಬಾಣಂತಿ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯ ಆರೋಪದ ಮೇಲೆ ಇದೀಗ ಆನೇಕಲ್ ಪೊಲೀಸ್ ಠಾಣೆಯಲ್ಲಿ ಮೃತ ಕವಿತಾ ಅಣ್ಣ ಮಧುಸೂದನ್ ದೂರು ದಾಖಲು ಮಾಡಿದ್ದಾರೆ. ಕೂಡಲೇ ಆಸ್ಪತ್ರೆ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
- Advertisement -