Saturday, June 28, 2025
spot_imgspot_img
spot_imgspot_img

ಹಾಡುಹಗಲೇ ವಕೀಲರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ..!

- Advertisement -
- Advertisement -

ಹಾಡುಹಗಲೇ ವಕೀಲರೊಬ್ಬರ ಬರ್ಬರ ಹತ್ಯೆ ನಡೆದಿದೆ. ನಗರದ ಸಾಯಿ ಮಂದಿರ ಬಳಿಯ ಅಪಾರ್ಟ್‌‌ಮೆಂಟ್ ಬಳಿ ಈ ಘಟನೆ ನಡೆದಿದೆ. ಈರಣ್ಣಗೌಡ ಪಾಟೀಲ್ (40) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಈರಣ್ಣಗೌಡ ಪಾಟೀಲರನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಹತ್ಯೆಗೈಯ್ದಿದ್ದಾರೆ. ಜಮೀನು ವಿವಾದ ಸಂಬಂಧಿಸಿದಂತೆ ಸಂಬಂಧಿಕರಿಂದಲೇ ಹತ್ಯೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹತ್ಯೆ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈರಣ್ಣಗೌಡ ಪಾಟೀಲರ ಹತ್ಯೆ ನಡೆದ ಸ್ಥಳಕ್ಕೆ ಗುಲ್ಬರ್ಗ ವಿವಿ ಠಾಣೆ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!