Sunday, June 29, 2025
spot_imgspot_img
spot_imgspot_img

ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಮಹಿಳೆಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

- Advertisement -
- Advertisement -

ಮೈಸೂರು : ಕಬ್ಬಿಣದ ರಾಡ್‌ನಿಂದ ಹೊಡೆದು ಮಹಿಳೆಯ ಹತ್ಯೆ ಮಾಡಿರುವ ಘಟನೆ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆದಿದೆ.

ಬಳಿಕ ಆರೋಪಿ ಎಸ್ಕೇಪ್​ ಆಗಿದ್ದು ಇದೀಗ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದ ಮಮತಾ(32) ಕೊಲೆಯಾದ ದುರ್ದೈವಿ. ಸಿದ್ದಲಿಂಗಪುರದಲ್ಲಿ ಆರೋಪಿ ಹಾಸನ ಮೂಲದ ಮೋಹನ್ ಹಾಗೂ ಮಮತಾ ಇಬ್ಬರು ಒಟ್ಟಾಗಿ ಬೇಕರಿ ನಡೆಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ನಿನ್ನೆ ಸಂಜೆ ಇಬ್ಬರ ನಡುವೆ ಏಕಾಏಕಿ ಮಾತಿಗೆ ಮಾತು‌ ಬೆಳೆದು ಮಮತಾಳನ್ನು ಹತ್ಯೆಗೈದು ಆರೋಪಿ ಪರಾರಿಯಾಗಿದ್ದಾನೆ.

ಕೊಲೆಯಾದ ಮಹಿಳೆ ಮಮತಾ ಗಂಡನಿಂದ‌ ದೂರ ಇದ್ದಳು. ಈ ಹಿನ್ನಲೆ ಆಕೆಯ ಜೊತೆ ಸಂಬಂಧ ಬೆಳೆಸಿದ್ದ ಮೋಹನ. ಜೊತೆಗೆ ಇಬ್ಬರು ಸೇರಿ ಸಿದ್ದಲಿಂಗಪುರದಲ್ಲಿ ಬೇಕರಿಯನ್ನು ನಡೆಸುತ್ತಿದ್ದರು. ಮೇ.24 ರ ಸಂಜೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ. ಬಳಿಕ ಮಾತಿಗೆ ಮಾತು ಬೆಳೆದು ಕೋಪದಿಂದ ಮೋಹನ್​ ಕಬ್ಬಿಣದ ರಾಡ್​ನಿಂದ ಬಲವಾಗಿ ತಲೆಗೆ ಹೊಡೆದೆ ಬಿಟ್ಟಿದ್ದಾನೆ. ನೆಲಕ್ಕೆ ಬಿದ್ದ ಯುವತಿ ಸ್ಥಳದಲ್ಲೆ ಮೃತಪಟ್ಟಿದ್ದು, ಆರೋಪಿ ಮೋಹನ್​ ಕೂಡಲೇ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಘಟನಾ ಸ್ಥಳಕ್ಕೆ ಮೇಟಗಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನ ಬಂಧಿಸಿದ್ದಾರೆ.

- Advertisement -

Related news

error: Content is protected !!